ಬ್ರೇಕಿಂಗ್ ನ್ಯೂಸ್
26-02-22 11:47 am HK Desk news ಕರ್ನಾಟಕ
ಬಾಗಲಕೋಟ, ಫೆ.26 : ಉಕ್ರೇನ್ ಮೇಲೆ ನಿರಂತರವಾಗಿ ರಷ್ಯಾ ಪಡೆಗಳು ಬಾಂಬ್ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಕನ್ನಡಿಗ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಉಕ್ರೇನಿನ ಪೂರ್ವ ಭಾಗದ ಖಾರ್ಕೀವ್ ನಗರದಲ್ಲಿ ಸಿಲುಕಿರುವ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಅಪೂರ್ವಾ ತನ್ನ ಹೆತ್ತವರಿಗೆ ವಾಟ್ಸಾಪ್ ಸಂದೇಶ ಮಾಡಿದ್ದು ಭಯ, ಆತಂಕ ತೋಡಿಕೊಂಡಿದ್ದಾರೆ.
ತಂದೆ ಸಿದ್ದಲಿಂಗೇಶ್ ಅವರಿಗೆ ಶುಕ್ರವಾರ ರಾತ್ರಿ ವಾಟ್ಸಾಪ್ ಸಂದೇಶ ಕಳಿಸಿರುವ ಅಪೂರ್ವಾ ಕದಂಪುರ, ನಮ್ಮನ್ನು ಭಾರತ ಸರಕಾರ ರಕ್ಷಣೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಭಾರತೀಯ ಸಮಯ 10.56 ರಾತ್ರಿ. ನಾವು ಇರುವ ಕಾರ್ಕೇವ್ ನಗರದಲ್ಲಿ ನಮ್ಮ ಕಟ್ಟಡದ ಹತ್ತಿರವೇ ಬಾಂಬ್ ಹಾಕುತ್ತಿದ್ದಾರೆ. ನಾವು ಅಪಾಯದಲ್ಲಿ ಇದ್ದೇವೆ ,ನಮ್ಮ ಫೋನ್ಗಳನ್ನು ಫ್ಲೈಟ್ ಮೋಡಿನಲ್ಲಿ ಇಡಲು ಹೇಳಿದ್ದಾರೆ. ಫೋನ್ ಸಂಪರ್ಕ ಆಗದಿದ್ದರೆ ಭಯ ಪಡಬೇಡಿ. ಆದರೆ ನಮ್ಮ ಭಾರತ ಸರ್ಕಾರಕ್ಕೆ ನಮ್ಮ ಮನವಿ ಏನೆಂದರೆ, ನಾವು ಹೆಚ್ಚು ವಿದ್ಯಾರ್ಥಿಗಳು ಇರುವುದು ಉಕ್ರೇನಿನ ಪೂರ್ವ ಭಾಗ ಕಾರ್ಕೇವ್ ನಗರದಲ್ಲಿ. ನಮ್ಮನ್ನು ಪೋಲಾಂಡ್ ಮುಖಾಂತರ ಕೊಂಡೊಯ್ಯಲು ಯತ್ನಿಸುವುದು ತುಂಬಾ ಕಷ್ಟ. ಅಲ್ಲಿಂದ ಹೋದರೆ ಸುಮಾರು 1000- 1500 ಕಿಲೋಮೀಟರ್ ದೂರ ಆಗುತ್ತದೆ.

ಅದರ ಬದಲು ನಮ್ಮನ್ನು ರೊಮೇನಿಯಾ ಮುಖಾಂತರವೇ ಸ್ಥಳಾಂತರ ಮಾಡಿದ್ರೆ ಸರಿ ಅನ್ಸುತ್ತೆ. ದಯವಿಟ್ಟು ನಮ್ಮ ಸರ್ಕಾರಕ್ಕೆ ನಮ್ಮ ಅಭಿಪ್ರಾಯ ತಲುಪಿಸಿ. ಇಲ್ಲಿ ನಾವು 8000 ಜನ ವಿದ್ಯಾರ್ಥಿಗಳಿದ್ದೇವೆ. ಯಾವುದೇ ಸಾರಿಗೆ ವ್ಯವಸ್ಥೆ ಸರಿ ಇಲ್ಲ.. ದಯವಿಟ್ಟು ನಮ್ಮ ಮನವಿಯನ್ನು ಭಾರತೀಯ ರಾಯಭಾರಿ ಕಚೇರಿಗೂ ತಲುಪಿಸಿ ಎಂದು ಅಪೂರ್ವ ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೆ, ಭಾರತ ಸರಕಾರಕ್ಕೆ ತಮ್ಮ ಮನವಿ ತಲುಪಿಸುವಂತೆ ಕೋರಿದ್ದಾರೆ. ಅಪೂರ್ವಾ ಬಾಗಲಕೋಟೆಯ ವಿದ್ಯಾಗಿರಿ ನಿವಾಸಿಯಾಗಿದ್ದು ಎಂಬಿಬಿ ಎಸ್ ಪ್ರಥಮ ವರ್ಷದ ವಿದ್ಯಾರ್ಥಿನಿ. ಇದೇ ರೀತಿ ಬನಹಟ್ಟಿ ಮೂಲದ ಕಿರಣ ಸವದಿ ಕೂಡ ಮನವಿ ಮಾಡಿದ್ದಾರೆ. ಕಿರಣ ಸವದಿ ಕೂಡ ಅದೇ ಕಾರ್ಕೀವ್ ನಗರದಲ್ಲಿದ್ದಾರೆ.
Bagalkot girl cries for help from Ukraine pleads indian govt to save her
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am