ಬ್ರೇಕಿಂಗ್ ನ್ಯೂಸ್
27-02-22 11:11 pm HK Desk news ಕರ್ನಾಟಕ
ಯಾದಗಿರಿ, ಫೆ 27: ಉದ್ಯೋಗ ಇಲ್ಲದವರು ಏನಾದರು ಮಾಡಬೇಕಲ್ಲ. ಕಾಂಗ್ರೆಸ್ನವರಿಗೆ ಯಾವುದೇ ಉದ್ಯೋಗ ಇಲ್ಲ, ಹಾಗಾಗಿ ಪಾದಯಾತ್ರೆ ಅಂತ ಹೊರಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ನಗರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಮೇಕೆದಾಟು ಮಾಡಬೇಡಿ ಅಂತ ಯಾರು ಹೇಳಿದ್ರು. ಈಗ ಮೇಕೆದಾಟು ಒಂದು, ಎರಡು ಅಂತ ಹೊರಟಿದ್ದಾರೆ. ಕಾಂಗ್ರೆಸ್ನವರು ಪಾದಯಾತ್ರೆಯಿಂದ ಅಧಿಕಾರದ ಕನಸು ಕಾಣ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಧಿಕಾರಕ್ಕೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೀರಶೈವ-ಲಿಂಗಾಯತ ಅಂತ ಒಡೆದರು, ಜಾತಿ-ಧರ್ಮ ಒಡೆದ ಮೇಲೆ ಜನ ಒಪ್ಪಲ್ಲ. ಹಾಗಾಗಿ ಸಿದ್ದರಾಮಯ್ಯ ಎಲ್ಲಾ ಸ್ಥಾಗಳನ್ನು ಕಳೆದುಕೊಂಡರು. ಕೇಸರಿ ಪೇಟ ಅಂದ್ರೆ ಸಿದ್ದರಾಮಯ್ಯಗೆ ಅಲರ್ಜಿ, ಮುಸಲ್ಮಾನರ ಪೇಟ ಅಂದ್ರೆ ಬಹಳ ಖುಷಿ ಎಂದು ಮಾತಿನಲ್ಲಿ ತಿವಿದರು.
ಹಿಂದೂ-ಮುಸಲ್ಮಾನರನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಮುಸಲ್ಮಾನರ ವೋಲೈಕೆಗಾಗಿ ಎಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಬೇರೆ ಬೇರೆ ಪಕ್ಷಕ್ಕೆ ಹೋಗಿ ಬಂದವರು. ಸಿದ್ದು ಸಿಎಂ ಅಭ್ಯರ್ಥಿ ಅಲ್ಲ ಎಂದು ಹೇಳಿದರೆ ಕಾಂಗ್ರೆಸ್ ಬಿಡುತ್ತಾರೆ. ಪಕ್ಷಕ್ಕಾಗಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿಲ್ಲ, ಅಧಿಕಾರಕ್ಕಾಗಿ ಮಾತ್ರ ಇರೋದು ಎಂದು ಟೀಕಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಅತ್ತೆ-ಸೊಸೆ ಇದ್ದಂತೆ. ಅತ್ತೆ, ಸೊಸೆಯಾದವರು ತಾಯಿ, ಮಗಳಂತೆ ಇರಬೇಕು. ಅತ್ತೆ ಸಾಯಿಲಿ ಎಂದು ಸೊಸೆ ಕಾಯುತ್ತಿದ್ದಾರೆ. ಸೊಸೆ ಯಾವಾಗ ಊರಿಗೆ ಹೋಗ್ತಾಳೆ ಎಂದು ಅತ್ತೆ ಕಾಯ್ತಿರ್ತಾಳೆ. ಆ ರೀತಿ ಅವರ ಸಂಬಂಧ ಇದೆ ಎಂದು ಅತ್ತೆ-ಸೊಸೆ ಸಂಬಂಧಕ್ಕೆ ಹೋಲಿಸಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು.
ಕಾಂಗ್ರೆಸ್ನವರು ಧರಣಿ ಕುಳಿತು ಇಡೀ ಅಧಿವೇಶನ ಹಾಳು ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಏನು ಮಾತಾಡಿದ್ದಾರೆ ಮತ್ತು ನಾನು ಏನು ಮಾಡಿದ್ದೇನೆ ಎಂಬುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ತಮ್ಮ ಮಾತುಗಳನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು.
Yadagiri Eshwarappa slams congress leaders siddaramaiah and dk shivakumar says they both are mother and daughter in laws. They both love to be under the hats of Muslims and not Hindus.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm