ಬ್ರೇಕಿಂಗ್ ನ್ಯೂಸ್
27-02-22 11:11 pm HK Desk news ಕರ್ನಾಟಕ
ಯಾದಗಿರಿ, ಫೆ 27: ಉದ್ಯೋಗ ಇಲ್ಲದವರು ಏನಾದರು ಮಾಡಬೇಕಲ್ಲ. ಕಾಂಗ್ರೆಸ್ನವರಿಗೆ ಯಾವುದೇ ಉದ್ಯೋಗ ಇಲ್ಲ, ಹಾಗಾಗಿ ಪಾದಯಾತ್ರೆ ಅಂತ ಹೊರಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ನಗರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಮೇಕೆದಾಟು ಮಾಡಬೇಡಿ ಅಂತ ಯಾರು ಹೇಳಿದ್ರು. ಈಗ ಮೇಕೆದಾಟು ಒಂದು, ಎರಡು ಅಂತ ಹೊರಟಿದ್ದಾರೆ. ಕಾಂಗ್ರೆಸ್ನವರು ಪಾದಯಾತ್ರೆಯಿಂದ ಅಧಿಕಾರದ ಕನಸು ಕಾಣ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಧಿಕಾರಕ್ಕೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೀರಶೈವ-ಲಿಂಗಾಯತ ಅಂತ ಒಡೆದರು, ಜಾತಿ-ಧರ್ಮ ಒಡೆದ ಮೇಲೆ ಜನ ಒಪ್ಪಲ್ಲ. ಹಾಗಾಗಿ ಸಿದ್ದರಾಮಯ್ಯ ಎಲ್ಲಾ ಸ್ಥಾಗಳನ್ನು ಕಳೆದುಕೊಂಡರು. ಕೇಸರಿ ಪೇಟ ಅಂದ್ರೆ ಸಿದ್ದರಾಮಯ್ಯಗೆ ಅಲರ್ಜಿ, ಮುಸಲ್ಮಾನರ ಪೇಟ ಅಂದ್ರೆ ಬಹಳ ಖುಷಿ ಎಂದು ಮಾತಿನಲ್ಲಿ ತಿವಿದರು.
ಹಿಂದೂ-ಮುಸಲ್ಮಾನರನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಮುಸಲ್ಮಾನರ ವೋಲೈಕೆಗಾಗಿ ಎಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಬೇರೆ ಬೇರೆ ಪಕ್ಷಕ್ಕೆ ಹೋಗಿ ಬಂದವರು. ಸಿದ್ದು ಸಿಎಂ ಅಭ್ಯರ್ಥಿ ಅಲ್ಲ ಎಂದು ಹೇಳಿದರೆ ಕಾಂಗ್ರೆಸ್ ಬಿಡುತ್ತಾರೆ. ಪಕ್ಷಕ್ಕಾಗಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿಲ್ಲ, ಅಧಿಕಾರಕ್ಕಾಗಿ ಮಾತ್ರ ಇರೋದು ಎಂದು ಟೀಕಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಅತ್ತೆ-ಸೊಸೆ ಇದ್ದಂತೆ. ಅತ್ತೆ, ಸೊಸೆಯಾದವರು ತಾಯಿ, ಮಗಳಂತೆ ಇರಬೇಕು. ಅತ್ತೆ ಸಾಯಿಲಿ ಎಂದು ಸೊಸೆ ಕಾಯುತ್ತಿದ್ದಾರೆ. ಸೊಸೆ ಯಾವಾಗ ಊರಿಗೆ ಹೋಗ್ತಾಳೆ ಎಂದು ಅತ್ತೆ ಕಾಯ್ತಿರ್ತಾಳೆ. ಆ ರೀತಿ ಅವರ ಸಂಬಂಧ ಇದೆ ಎಂದು ಅತ್ತೆ-ಸೊಸೆ ಸಂಬಂಧಕ್ಕೆ ಹೋಲಿಸಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು.
ಕಾಂಗ್ರೆಸ್ನವರು ಧರಣಿ ಕುಳಿತು ಇಡೀ ಅಧಿವೇಶನ ಹಾಳು ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಏನು ಮಾತಾಡಿದ್ದಾರೆ ಮತ್ತು ನಾನು ಏನು ಮಾಡಿದ್ದೇನೆ ಎಂಬುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ತಮ್ಮ ಮಾತುಗಳನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು.
Yadagiri Eshwarappa slams congress leaders siddaramaiah and dk shivakumar says they both are mother and daughter in laws. They both love to be under the hats of Muslims and not Hindus.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm