ಬ್ರೇಕಿಂಗ್ ನ್ಯೂಸ್
27-02-22 11:11 pm HK Desk news ಕರ್ನಾಟಕ
ಯಾದಗಿರಿ, ಫೆ 27: ಉದ್ಯೋಗ ಇಲ್ಲದವರು ಏನಾದರು ಮಾಡಬೇಕಲ್ಲ. ಕಾಂಗ್ರೆಸ್ನವರಿಗೆ ಯಾವುದೇ ಉದ್ಯೋಗ ಇಲ್ಲ, ಹಾಗಾಗಿ ಪಾದಯಾತ್ರೆ ಅಂತ ಹೊರಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.
ನಗರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಮೇಕೆದಾಟು ಮಾಡಬೇಡಿ ಅಂತ ಯಾರು ಹೇಳಿದ್ರು. ಈಗ ಮೇಕೆದಾಟು ಒಂದು, ಎರಡು ಅಂತ ಹೊರಟಿದ್ದಾರೆ. ಕಾಂಗ್ರೆಸ್ನವರು ಪಾದಯಾತ್ರೆಯಿಂದ ಅಧಿಕಾರದ ಕನಸು ಕಾಣ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಧಿಕಾರಕ್ಕೆ ಬರಲ್ಲ ಎಂದು ವಾಗ್ದಾಳಿ ನಡೆಸಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೀರಶೈವ-ಲಿಂಗಾಯತ ಅಂತ ಒಡೆದರು, ಜಾತಿ-ಧರ್ಮ ಒಡೆದ ಮೇಲೆ ಜನ ಒಪ್ಪಲ್ಲ. ಹಾಗಾಗಿ ಸಿದ್ದರಾಮಯ್ಯ ಎಲ್ಲಾ ಸ್ಥಾಗಳನ್ನು ಕಳೆದುಕೊಂಡರು. ಕೇಸರಿ ಪೇಟ ಅಂದ್ರೆ ಸಿದ್ದರಾಮಯ್ಯಗೆ ಅಲರ್ಜಿ, ಮುಸಲ್ಮಾನರ ಪೇಟ ಅಂದ್ರೆ ಬಹಳ ಖುಷಿ ಎಂದು ಮಾತಿನಲ್ಲಿ ತಿವಿದರು.
ಹಿಂದೂ-ಮುಸಲ್ಮಾನರನ್ನು ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಮುಸಲ್ಮಾನರ ವೋಲೈಕೆಗಾಗಿ ಎಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಬೇರೆ ಬೇರೆ ಪಕ್ಷಕ್ಕೆ ಹೋಗಿ ಬಂದವರು. ಸಿದ್ದು ಸಿಎಂ ಅಭ್ಯರ್ಥಿ ಅಲ್ಲ ಎಂದು ಹೇಳಿದರೆ ಕಾಂಗ್ರೆಸ್ ಬಿಡುತ್ತಾರೆ. ಪಕ್ಷಕ್ಕಾಗಿ ಸಿದ್ದರಾಮಯ್ಯ ಕಾಂಗ್ರೆಸ್ನಲ್ಲಿಲ್ಲ, ಅಧಿಕಾರಕ್ಕಾಗಿ ಮಾತ್ರ ಇರೋದು ಎಂದು ಟೀಕಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಅತ್ತೆ-ಸೊಸೆ ಇದ್ದಂತೆ. ಅತ್ತೆ, ಸೊಸೆಯಾದವರು ತಾಯಿ, ಮಗಳಂತೆ ಇರಬೇಕು. ಅತ್ತೆ ಸಾಯಿಲಿ ಎಂದು ಸೊಸೆ ಕಾಯುತ್ತಿದ್ದಾರೆ. ಸೊಸೆ ಯಾವಾಗ ಊರಿಗೆ ಹೋಗ್ತಾಳೆ ಎಂದು ಅತ್ತೆ ಕಾಯ್ತಿರ್ತಾಳೆ. ಆ ರೀತಿ ಅವರ ಸಂಬಂಧ ಇದೆ ಎಂದು ಅತ್ತೆ-ಸೊಸೆ ಸಂಬಂಧಕ್ಕೆ ಹೋಲಿಸಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು.
ಕಾಂಗ್ರೆಸ್ನವರು ಧರಣಿ ಕುಳಿತು ಇಡೀ ಅಧಿವೇಶನ ಹಾಳು ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಏನು ಮಾತಾಡಿದ್ದಾರೆ ಮತ್ತು ನಾನು ಏನು ಮಾಡಿದ್ದೇನೆ ಎಂಬುದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ತಮ್ಮ ಮಾತುಗಳನ್ನು ಮತ್ತೊಮ್ಮೆ ಸಮರ್ಥಿಸಿಕೊಂಡರು.
Yadagiri Eshwarappa slams congress leaders siddaramaiah and dk shivakumar says they both are mother and daughter in laws. They both love to be under the hats of Muslims and not Hindus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am