ಬ್ರೇಕಿಂಗ್ ನ್ಯೂಸ್
01-03-22 08:34 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.1: ಹಿಜಾಬ್ ಕುರಿತು ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ಜಡ್ಜ್ ವಿರುದ್ಧ ಕೀಳಾಗಿ ಚಿತ್ರಿಸಿ ಬರೆದಿದ್ದ ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ವಿರುದ್ಧ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಕೇಸು ದಾಖಲಿಸಿದ್ದಾರೆ.
ಮಂಗಳೂರು ಮುಸ್ಲಿಮ್ಸ್ ಪೇಜ್ ಅಡ್ಮಿನ್ ಆಗಿರುವ ಅತೀಕ್ ಶರೀಫ್ ಎಂಬಾತನ ವಿರುದ್ಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಾಗಿದೆ. ಫೆ.12ರಂದು ಈ ಬಗ್ಗೆ ಪೋಸ್ಟ್ ಮಾಡಿದ್ದು ಜಡ್ಜ್ ವಿಶ್ವಾಸಾರ್ಹತೆಯನ್ನು ಪ್ರಶ್ನೆ ಮಾಡಲಾಗಿತ್ತು. ಈ ರೀತಿಯ ಜಡ್ಜ್ ನಿಂದ ಹಿಜಾಬ್ ಕುರಿತ ಅರ್ಜಿಗೆ ನ್ಯಾಯ ದೊರಕಲು ಸಾಧ್ಯವೇ ಎಂದು ಜಡ್ಜ್ ಕೃಷ್ಣ ಎಸ್. ದೀಕ್ಷಿತ್ ಭಾಗವಹಿಸಿದ್ದ ಕಾರ್ಯಕ್ರಮದ ಫೋಟೋವನ್ನು ಮುಂದಿಟ್ಟು ಪ್ರಶ್ನೆ ಮಾಡಲಾಗಿತ್ತು.
ಈ ಫೇಸ್ಬುಕ್ ಪೋಸ್ಟ್ ಬಗ್ಗೆ ಲೈಕ್, ಕಮೆಂಟ್ಸ್ ಮಾಡಿದ್ದವರ ವಿರುದ್ಧವೂ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಹಿಜಾಬ್ ಪ್ರಕರಣದಲ್ಲಿ ವಿಚಾರಣೆ ಮತ್ತು ತೀರ್ಪು ನೀಡಲು ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರಿತುರಾಜ್ ಅವಸ್ಥಿ, ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆಎಂ ಖಾಝಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚಿಸಲಾಗಿತ್ತು.
ಇತ್ತೀಚೆಗೆ ನಟ ಅಹಿಂಸಾ ಚೇತನ್ ಕೂಡ ಹಿಜಾಬ್ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಬಗ್ಗೆ ಪ್ರಶ್ನೆ ಮಾಡಿ, ಜೈಲು ಸೇರಿದ್ದರು. ಚೇತನ್ ತಾನು ಫೇಸ್ಬುಕ್ ನಲ್ಲಿ ಬರೆದಿದ್ದ ಎರಡು ವರ್ಷಗಳ ಹಿಂದಿನ ಪೋಸ್ಟ್ ಒಂದನ್ನು ಟ್ವಿಟರ್ ನಲ್ಲಿ ಷೇರ್ ಮಾಡಿದ್ದರು. ಈ ಜಡ್ಜ್ ರೇಪ್ ಪ್ರಕರಣದಲ್ಲಿ ಸಮಾಜಬಾಹಿರ ಪ್ರತಿಕ್ರಿಯೆ ಒಂದನ್ನು ನೀಡಿದ್ದರು. ಇಂಥ ನ್ಯಾಯಾಧೀಶರು ಹಿಜಾಬ್ ಕುರಿತು ತೀರ್ಪು ನಿರೀಕ್ಷಿಸಲು ಸಾಧ್ಯವೇ. ಇವರ ತೀರ್ಪು ಸರ್ವಸಮ್ಮತ ಇರಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಲ್ಲದೆ, ನಟನನ್ನು ಬಂಧಿಸಿದ್ದರು.
ಮಂಗಳೂರು ಮುಸ್ಲಿಮ್ಸ್ ಫೇಸ್ಬುಕ್ ಪೇಜ್ ವಿರುದ್ಧ ಕಳೆದ ಫೆ.23ರಂದು ಮಂಗಳೂರಿನ ಪೊಲೀಸರು ಕೂಡ ಕೇಸು ದಾಖಲಿಸಿದ್ದರು. ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನನ್ನು ಬೀದಿ ನಾಯಿ ಎಂದು ಕರೆದಿದ್ದಲ್ಲದೆ, 2015ರಲ್ಲಿ ಪ್ರವಾದಿ ಪೈಗಂಬರ್ ಅವರನ್ನು ಅವಹೇಳಕಾರಿ ಬರೆದಿದ್ದಕ್ಕೆ ಈ ಶಿಕ್ಷೆ ಸಿಕ್ಕಿದೆ ಎಂದು ಅರ್ಥ ಬರುವಂತೆ ಪೋಸ್ಟ್ ಮಾಡಲಾಗಿತ್ತು.
On Tuesday, the Cyber Crime Division of the Bengaluru South division registered a case against Ateeq Shariff, the administrator of a Facebook page ‘Mangalore Muslims’ for posting derogatory messages against one of the three judges of the Karnataka High Court hearing the hijab case. The case has been registered against Shariff and another associate for posting derogatory content on February 12 against one of the judges questioning his credentials and integrity. The case was registered by the Cyber Crime Division on its own.
04-05-24 10:29 am
HK News Desk
HD Revanna, Lookout notice: ಕೊರಳು ಸುತ್ತಿಕೊಂಡ...
03-05-24 10:19 pm
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
04-05-24 01:50 pm
HK News Desk
C V Ananda Bose, West Bengal governor: ಪಶ್ಚಿಮ...
03-05-24 10:58 pm
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
04-05-24 12:41 pm
Mangalore Correspondent
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
Mangalore Accident, Kotekar: ಕಾರು ಚಾಲಕನ ಧಾವಂತ...
03-05-24 08:32 pm
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
04-05-24 12:23 pm
HK News Desk
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm