ಬ್ರೇಕಿಂಗ್ ನ್ಯೂಸ್
02-03-22 04:55 pm HK Desk news ಕರ್ನಾಟಕ
ಕಲಬುರಗಿ, ಮಾ.2: ಆಳಂದ ಪಟ್ಟಣದಲ್ಲಿ ಶಿವಲಿಂಗ ಪೂಜೆ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿ ಪೊಲೀಸರು 167 ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 10 ಮಹಿಳೆಯರು ಸೇರಿದ್ದಾರೆ.
ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸದಲ್ಲಿ ಹಳೆಯ ಕಾಲದ ಶಿವಲಿಂಗ ಇದ್ದು ಇತ್ತೀಚಿಗೆ ಲಿಂಗಕ್ಕೆ ಯಾರೋ ಕಿಡಿಗೇಡಿಗಳು ಅವಮಾನಿಸಿದ್ದರು. ಹೀಗಾಗಿ ಶಿವರಾತ್ರಿ ನಿಮಿತ್ತ ಈಶ್ವರಲಿಂಗ ಶುದ್ಧೀಕರಣ ಅಭಿಯಾನವನ್ನು ಶ್ರೀರಾಮ ಸೇನೆ ಹಮ್ಮಿಕೊಂಡಿತ್ತು. ಇದಕ್ಕೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಆಳಂದ ಪಟ್ಟಣದಲ್ಲಿ ಜಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು. ಆದರೂ ಶಿವಲಿಂಗ ಪೂಜೆಗಾಗಿ ಆಳಂದಕ್ಕೆ ಸಾವಿರಾರು ಹಿಂದುಪರ ಕಾರ್ಯಕರ್ತರು ಆಗಮಿಸಿದ್ದರು. ಸ್ಥಳೀಯ ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿತ್ತು.


ಪೂಜೆ ಮಾಡಲು ಬಂದಿದ್ದ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಸುಭಾಷ್ ಗುತ್ತೇದಾರ, ರಾಜಕುಮಾರ್ ಪಾಟೀಲ್ ತೆಲ್ಕೂರ ಸೇರಿ ಹಿಂದು ಸಂಘಟನೆಯ ಮಂದಿಯನ್ನು ದರ್ಗಾದೊಳಗೆ ಬಿಡುವುದಿಲ್ಲ ಎಂದು ಮುಸ್ಲಿಂ ಸಮಾಜದವರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಎರಡೂ ಕಡೆ ಗುಂಪು ಸೇರಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಕೊನೆಗೆ ಸಚಿವ ಖೂಬಾ ಸೇರಿ ಹತ್ತು ಜನರನ್ನು ಮಾತ್ರ ಶಿವಲಿಂಗ ಪೂಜೆಗೆ ಒಳಗೆ ಬಿಡಲಾಗಿತ್ತು. ಆದರೆ ಇದನ್ನು ವಿರೋಧಿಸಿ ಕಲ್ಲು ತೂರಾಟ ಮಾಡಲಾಗಿತ್ತು. ಅಲ್ಲದೆ, ದೊಣ್ಣೆ ಹಿಡಿದು ಘರ್ಷಣೆಗೆ ಮುಂದಾಗಿದ್ದು ಪೊಲೀಸರು ಲಾಠಿಚಾರ್ಜ್ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದರು.


ಘಟನೆ ಹಿನ್ನೆಲೆಯಲ್ಲಿ ಆಳಂದ ಪಟ್ಟಣದಲ್ಲಿ ಬಂದ್ ವಾತಾವರಣವಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಆಳಂದ ಪಟ್ಟಣ ಸಂಪೂರ್ಣ ಶಾಂತವಿದೆ. ಇಡೀ ಪಟ್ಟಣ ಪೊಲೀಸರ ಸುಪರ್ದಿಯಲ್ಲಿದೆ ಎಂದು ಎಸ್ಪಿ ಇಶಾ ಪಂತ್ ಹೇಳಿದ್ದಾರೆ. ನಿನ್ನೆಯ ಗಲಾಟೆ ಪ್ರಕರಣದಲ್ಲಿ 167 ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನ ಆದಷ್ಟು ಬೇಗ ಬಂಧಿಸಲಾಗುತ್ತದೆ. ಪೊಲೀಸರ ಸಕಾಲಿಕ ಕ್ರಮದಿಂದ ಹೆಚ್ಚಿನ ಅನಾಹುತಗಳಾಗಿಲ್ಲ. ಕೆಲವರು ಮನೆ ಮೇಲೆ ಕಲ್ಲು, ಬಡಿಗೆಗಳು ಜಮೆ ಮಾಡಿರುವ ಬಗ್ಗೆ ಇಂಟೆಲಿಜೆನ್ಸ್ ಮಾಹಿತಿ ಇತ್ತು. ಮಾಹಿತಿ ಪ್ರಕಾರ ಅವೆಲ್ಲವುಗಳನ್ನ ವಶಕ್ಕೆ ಪಡೆದಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಇಶಾ ಪಂತ್ ಮಾಹಿತಿ ನೀಡಿದ್ದಾರೆ.
Hindu Muslim shout slogans in Kalburgi after miscreants desecrate shivalinga, 10 woman along with 167 people arrested.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm