ಬ್ರೇಕಿಂಗ್ ನ್ಯೂಸ್
03-03-22 10:31 am HK Desk news ಕರ್ನಾಟಕ
ವಿಜಯಪುರ, ಮಾ.3: ಉಕ್ರೇನಲ್ಲಿ ಹಾವೇರಿ ಜಿಲ್ಲೆಯ ನವೀನ್ ಎಂಬ ಯುವಕ ಮೃತಪಟ್ಟ ಬಳಿಕ ಅಲ್ಲಿ ಸಿಕ್ಕಿಬಿದ್ದಿರುವ ವಿದ್ಯಾರ್ಥಿಗಳ ಹೆತ್ತವರು, ಸಂಬಂಧಿಕರ ಆಕ್ರೋಶ ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ಧ ತಿರುಗಿದೆ. ವಿಜಯಪುರ ಜಿಲ್ಲೆಯ ವಿವಿಧಾ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ತಂದೆ ಮಲ್ಲಿಕಾರ್ಜುನಮಠ ಮನೆಯಲ್ಲಿ ಆತಂಕದ ನಡುವೆಯೇ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಾರತ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನವೀನ್ ಸಾವು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ, ಕೇಂದ್ರ ಸಚಿವರು, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರ್ಕಾರ ಭಾರತೀಯರನ್ನ ರಕ್ಷಣೆ ಮಾಡೋ ಗಂಧ ಗಾಳಿ ಗೊತ್ತಿಲ್ಲದಂತೆ ಮಾಡುತ್ತಿದೆ. ಒಂದು ವಾರ ಆದ್ರೂ ಈಗ ಎಚ್ಚೆತ್ತ ರೀತಿ ಮಾಡುತ್ತಿದ್ದಾರೆ. ಎಲ್ಲ ಮೋದಿ ಅವರ ಹೆಸರು ಹೇಳುತ್ತಾರೆ. ಮೋದಿ ಒಬ್ಬರೇ ಏನು ಮಾಡಲು ಸಾಧ್ಯ, ಕೇಂದ್ರದಲ್ಲಿ ಮೋದಿ ಅವರನ್ನು ಬಿಟ್ಟು ಎಲ್ಲರೂ ಅಸಮರ್ಥರು.
ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕೈಲಿ ಏನೂ ಮಾಡಲಾಗುತ್ತಿಲ್ಲ. ರಾಜ್ಯದ 28 ಸಂಸದರು ಇದ್ದೂ ಇಲ್ಲದಂತಿದ್ದಾರೆ. ವಿಜಯಪುರ ಸಂಸದ ರಮೇಶ ಜಿಗಜಿಣಗಿ ಒಬ್ಬ ದರಿದ್ರ. ಇವರೆಲ್ಲಾ ನನ್ನ ಮಗಳ ಹಾಗೂ ಎಲ್ಲ ವಿದ್ಯಾರ್ಥಿಗಳ ಜೀವ ತೆಗೆಯಲು ನಿಂತಿದ್ದಾರೆ. ನನ್ನ ಮಗಳಿಗೆ ಏನಾದರೂ ಆದರೆ ವಿಜಯಪುರ ಸಂಸದ ಹಾಗೂ ದೇಶದ ಸಂಸದರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಸ್ಲಿಂ ಸಮುದಾಯದ ಜನರು ನನಗೆ ಇಲ್ಲಿ ಸ್ವಲ್ಪ ಧೈರ್ಯ ತುಂಬಿದ್ದಾರೆ. ಮೋದಿ ಅವರು ರಷ್ಯಾ ಜೊತೆಗೆ ಮಾತನಾಡಿದರೆ ಕೆಲವೇ ನಿಮಿಷಗಳಲ್ಲಿ ನಮ್ಮ ಮಕ್ಕಳು ಸುರಕ್ಷಿತವಾಗಿ ರಷ್ಯಾ ಬಾರ್ಡರ್ ಸೇರುತ್ತಾರೆ. ಆದರೆ ಈ ಕೆಲಸ ಆಗುತ್ತಿಲ್ಲ. ಸದ್ಯ ಮಗಳ ಜೊತೆಗೆ ಸಂಪರ್ಕದಲ್ಲಿದ್ದೇನೆ, ವಿಡಿಯೋ ಕಾಲ್ ನಲ್ಲಿ ಅಲ್ಲಿನ ಭಯಾನಕತೆಯನ್ನು ಕಣ್ಣಾರೆ ನೋಡಿದ್ದೇನೆ. ಬಾಂಬ್ ದಾಳಿ, ರಾಕೆಟ್ ದಾಳಿ ನೋಡಿದ್ದೇನೆ. ಎಲ್ಲರನ್ನೂ ತುರ್ತಾಗಿ ಸುರಕ್ಷಿತವಾಗಿ ಕರೆ ಕರೆತರಬೇಕಿದೆ. ನನ್ನ ಮಗಳು ವಿವಿಧಾ ಸಹಿತ 12 ವಿದ್ಯಾರ್ಥಿಗಳು ಅಲ್ಲಿದ್ದಾರೆ. ರೈಲಿನ ಮೂಲಕ ಪೊಲೇಂಡ್ ನತ್ತ ಹೊರಟಿದ್ದಾರೆ ಎನ್ನುವ ಮಾಹಿತಿಯಿದೆ.
ಉಕ್ರೇನಿನ ಖಾರ್ಕಿವ್ ನಲ್ಲಿ ಸಿಲುಕಿದ್ದ ವಿವಿಧಾ ಮಲ್ಲಿಕಾರ್ಜುನಮಠ, ಅಲ್ಲಿಂದ ರೈಲು ಮೂಲಕ ಪ್ರಯಾಣ ಬೆಳೆಸಿದ್ದಾರೆ. ಗಡಿ ಭಾಗದ ಉಜಗೊಂಡ, ಲಿವಿವ್ ಮೂಲಕ ಪೋಲೆಂಡ್ ದೇಶ ತಲುಪಲಿದ್ದಾರೆ. ನಂತರ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಮಲ್ಲಿಕಾರ್ಜುನ ಮಠ ಹೇಳಿದ್ದಾರೆ.
Vijayapura Ramesh Jigajinagi is a cursed man he's of no help slam parents of Ukraine students. There are 28 MPs but that's of no has he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm