ಮೇಕೆದಾಟು ಪಾದಯಾತ್ರೆ ; ಟ್ರಾಫಿಕ್ ಮಧ್ಯೆ ಸಿಕ್ಕಿಬಿದ್ದ ಹೈಕೋರ್ಟ್ ನ್ಯಾಯಾಧೀಶರಿಂದ ಸರಕಾರಕ್ಕೆ ತರಾಟೆ ! ಇನ್ಮುಂದೆ ನಗರದಲ್ಲಿ ಪ್ರತಿಭಟನೆಗೆ ಅವಕಾಶ ನೀಡದಂತೆ ತಾಕೀತು !

03-03-22 07:13 pm       Bengaluru Correspondent   ಕರ್ನಾಟಕ

ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಿಂದಾಗಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಅನುಭವಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಕಾರವನ್ನು ತರಾಟೆಗೆ ಎತ್ತಿಕೊಂಡಿದ್ದಾರೆ.‌ 

ಬೆಂಗಳೂರು, ಮಾ.3: ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಿಂದಾಗಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಅನುಭವಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಕಾರವನ್ನು ತರಾಟೆಗೆ ಎತ್ತಿಕೊಂಡಿದ್ದಾರೆ.‌ 

ಪಾದಯಾತ್ರೆಯ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದರಿಂದ ನ್ಯಾಯಾಧೀಶರು ಒಂದು ಗಂಟೆ ತಡವಾಗಿ ಕೋರ್ಟಿಗೆ ಆಗಮಿಸಿದ್ದು ಕಲಾಪ ತಡವಾಗಿ ಆರಂಭಿಸುವಂತಾಗಿತ್ತು. ಇದರಿಂದ ಸಿಟ್ಟುಗೊಂಡ ನ್ಯಾಯಾಧೀಶರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ಬೇಕಾಯಿತು.‌ ಇಂತದರಲ್ಲಿ ಜನಸಾಮಾನ್ಯರು ಓಡಾಡುವುದು ಹೇಗೆ..? ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಬೇಕು ಎಂದು ಸರಕಾರಕ್ಕೆ  ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ತಾಕೀತು ಮಾಡಿದೆ.Mekedatu padayatra: After defiant stand, Congress finds itself in spot- The  New Indian Express

ಬೆಂಗಳೂರು ನಗರ ಭಾಗದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳಲು ಅವಕಾಶ ನೀಡಬಾರದು.‌ ಪ್ರತಿಭಟನೆಗಳನ್ನು ಮಾಡುವುದಿದ್ದರೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರವೇ ನಡೆಸಲು ಅನುಮತಿ ನೀಡಬೇಕು. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಆದೇಶ ಮಾಡಿದ್ದಾರೆ.‌ ಈ ಆದೇಶ ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಅಡಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. 

ಈ ಬಗ್ಗೆ ಸ್ವಯಂಪ್ರೇರಿತವಾಗಿ ಹೈಕೋರ್ಟ್ ನ್ಯಾಯಪೀಠ ಪ್ರಕರಣ ದಾಖಲಿಸಿಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಪ್ರತಿಭಟನೆ ನಿಷೇಧಿಸಿ ಆದೇಶ ಮಾಡಿದೆ

The Karnataka High Court on Thursday, March 3, objected to the padayatra organized by the opposition Congress demanding start of work on the Mekedatu project, which will provide drinking water to Bengaluru and surrounding areas. The court further ordered the Congress not to take up any protest in Bengaluru henceforth. The Division Bench headed by Chief Justice Ritu Raj Awasthi and Justice S R Krishnakumar gave this order.