ಸಿಎಂ ಬಜೆಟ್ ಮುಖ್ಯಾಂಶ ; ಕಾಶಿ ಯಾತ್ರೆಗೆ ಸಹಾಯಧನ, ಕುಕ್ಕೆ, ತಿರುಪತಿ ಪ್ರವಾಸಕ್ಕೆ ಪ್ಯಾಕೇಜ್ ಟ್ರಿಪ್ ಘೋಷಣೆ

04-03-22 03:31 pm       Bengaluru Correspondent   ಕರ್ನಾಟಕ

ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರು, ಮಾ.4: ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಿದ್ದು, ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಮಂದಿಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ 30 ಸಾವಿರ ಮಂದಿಗೆ ತಲಾ 5 ಸಾವಿರ ರೂ. ಸಹಾಯಧನ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ. ಅಲ್ಲದೆ, ಪುಣ್ಯಕ್ಷೇತ್ರ ಶ್ರೀಶೈಲದಲ್ಲಿ ರೂ.85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಇದರ ಮೊದಲ ಹಂತದ ಕಾಮಗಾರಿಗೆ ರೂ. 45 ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೆ, ಪುಣ್ಯಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಯಾತ್ರೆ ಕೈಗೊಳ್ಳಲು ಪ್ರತ್ಯೇಕ ಪ್ಯಾಕೇಜ್ ಹಮ್ಮಿಕೊಳ್ಳಲಾಗುವುದು. ಪ್ರವಾಸಿಗರಿಗೆ ಅನುವಾಗುವಂತೆ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್, ತಿರುಪತಿ ಸೇರಿದಂತೆ ಇನ್ನಿತರ ಪ್ರವಾಸಿ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ಯಾಕೇಜ್ ಟ್ರಿಪ್ ಸೇವೆ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

KSTDC "Pavitra Yatre" programme to facilitate tours to piligrimage centres 30,000 Kashi pilgrims to get a subsidy of Rs 5,000 per person.