ಮೇಕೆದಾಟಿಗೆ ಸಾವಿರ ಕೋಟಿ, ‘ನೀರೇ ಇಲ್ಲದ’ ಎತ್ತಿನಹೊಳೆಗೆ ಮೂರು ಸಾವಿರ ಕೋಟಿ ಸುರಿದ ಸಿಎಂ ಬೊಮ್ಮಾಯಿ !  

04-03-22 03:43 pm       Bengaluru Correspondent   ಕರ್ನಾಟಕ

ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ಉದ್ದೇಶಿತ ಮೇಕೆದಾಟು ಯೋಜನೆ ಕಾಮಗಾರಿಗೆ ಒಂದು ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಮಾ.4: ರಾಜ್ಯ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದ್ದು, ಉದ್ದೇಶಿತ ಮೇಕೆದಾಟು ಯೋಜನೆ ಕಾಮಗಾರಿಗೆ ಒಂದು ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ.

ಕೇಂದ್ರ ಸರಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ನೀಡಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು. ಇದಕ್ಕಾಗಿ ಒಂದು ಸಾವಿರ ಕೋಟಿ ಅನುದಾನ ತೆಗೆದಿರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ರೂ. 5 ಸಾವಿರ ಕೋಟಿ ನೀಡಲಾಗುವುದು. ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಒಂದು ಸಾವಿರ ಕೋಟಿ ತೆಗೆದಿರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗಾಗಿ ರೂ. 3 ಸಾವಿರ ಕೋಟಿ ಅನುದಾನ ನೀಡಲಾಗುವುದು. ಅಲ್ಲದೆ, ಕಳೆದ ಬಾರಿ ಸಿದ್ದರಾಮಯ್ಯ ಸರಕಾರ ಇದ್ದಾಗ ಆರಂಭಿಸಿದ್ದ ಎತ್ತಿನಹೊಳೆ ಯೋಜನೆಯ ಕಾಮಗಾರಿಗೆ ಮತ್ತೆ ಮೂರು ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಜಾರಿಗೆ ಕರಾವಳಿ ಭಾಗದಲ್ಲಿ ಭಾರೀ ವಿರೋಧ ಇದ್ದರೂ, ಅದನ್ನು ಲೆಕ್ಕಿಸದೆ ರಾಜ್ಯ ಸರಕಾರ ಯೋಜನೆ ಜಾರಿ ಮಾಡಿತ್ತು. ಅಲ್ಲದೆ, ಎತ್ತಿನಹೊಳೆ ಯೋಜನೆಯಿಂದ ನೀರು ಸಿಗದು ಎಂದು ನೀರಾವರಿ ತಜ್ಞರು ಕೂಡ ಸರಕಾರಕ್ಕೆ ವರದಿ ನೀಡಿದ್ದರು. ಹಾಗಿದ್ದರೂ, ಪ್ರತಿವರ್ಷ ಯೋಜನೆ ಅನುಷ್ಠಾನಕ್ಕಾಗಿ 2ರಿಂದ ಮೂರು ಸಾವಿರ ಕೋಟಿ ಅನುದಾನ ನೀಡುತ್ತಿದ್ದಾರೆ.

Chief Minister Basavaraj Bommai, who also holds the Finance portfolio, presented his maiden budget on Friday. He stated that he will not impose any additional taxes on the common man or increase the sales tax on petrol or diesel. A total of Rs 1,000 crores has been earmarked for the completion of the Mekedatu Balancing Reservoir and Bengaluru Drinking Water Project, which will be implemented by getting required clearances from the appropriate authority of Central Government.