ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm