ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm