ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm