ಬ್ರೇಕಿಂಗ್ ನ್ಯೂಸ್
21-09-20 10:37 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ಕೋವಿಡ್ ಸೋಂಕಿನ ಆತಂಕ, ಭಯದ ನಡುವೆ ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಬಹುತೇಕ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳುವುದರಿಂದ ದೂರ ಉಳಿಯಲಿದ್ದಾರೆ.
ಒಂದೆಡೆ ಕೊರೊನಾ ಸೋಂಕಿನಿಂದಾಗಿ 70 ರಷ್ಟು ಶಾಸಕರು ಅಧಿವೇಶನಕ್ಕೆ ಬರಲಾಗದೆ ಕ್ವಾರಂಟೈನ್ ಆಗಿದ್ದಾರೆ. ಅಧಿವೇಶನಕ್ಕೆ ಬರುವ ಶಾಸಕರು, ಅಧಿಕಾರಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕಿದೆ. ಇದೇ ವೇಳೆ ಉತ್ತರ ಕರ್ನಾಟಕ ಮಳೆಯ ರೌದ್ರಾವತಾರ ಹಿನ್ನೆಲೆಯಲ್ಲಿ ಆ ಭಾಗದ ಶಾಸಕರು ಬೆಂಗಳೂರು ಬರುವುದನ್ನು ಮುಂದೂಡಿದ್ದಾರೆ. ಈ ಕಾರಣದಿಂದ ಇಂದಿನ ಅಧಿವೇಶನಕ್ಕೆ ಬಹುತೇಕ ಶಾಸಕರ ಹಾಜರಾತಿ ಕಡಿಮೆಯಾಗಲಿದೆ. ಇನ್ನು ಒಂಬತ್ತು ದಿನಗಳ ಅಧಿವೇಶನ ಎಂದು ಹೇಳುತ್ತಿದ್ದರೂ ಕೊರೊನಾದಿಂದಾಗಿ ಎಷ್ಟು ದಿನ ಸದನ ನಡೆಯಲಿದೆ ಎನ್ನುವುದರ ಖಾತ್ರಿಯಿಲ್ಲ. ಈ ಬಗ್ಗೆ ಸೋಮವಾರ ಸದನ ಸಮಿತಿ ಸಭೆಯಲ್ಲಿ ನಿರ್ಧಾರವಾಗಲಿದೆ ಎನ್ನಲಾಗುತ್ತಿದೆ.

ಡಿಸಿಎಂ ಡಾ| ಅಶ್ವತ್ಥನಾರಾಯಣ ಮತ್ತು ಸಚಿವರಾದ ಬಸವರಾಜ ಬೊಮ್ಮಾಯಿ, ಬೈರತಿ ಬಸವರಾಜ್, ಕೆ. ಗೋಪಾಲಯ್ಯ, ಸಚಿವ ಪ್ರಭು ಚವ್ಹಾಣ್ ಕೋವಿಡ್ 19 ಸೋಂಕಿನಿಂದ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಸುಮಾರು 70 ಶಾಸಕರು ಕೋವಿಡ್ 19 ಸೋಂಕಿನ ಕಾರಣಕ್ಕೆ ಕ್ವಾರಂಟೈನ್ ಆಗಿದ್ದಾರೆ ಎನ್ನುವ ಮಾಹಿತಿಯಿದೆ.
ವಿಧಾನಸಭೆಯ ಹಾಲ್ನಲ್ಲಿ 300 ಆಸನಗಳಿದ್ದು, 269 ಆಸನಗಳಿಗೆ ಮೈಕ್ ವ್ಯವಸ್ಥೆ ಮಾಡಲಾಗಿದೆ. ದಿನವೂ ಸ್ಯಾನಿಟೈಸೇಶನ್, ಶಾಸಕರು - ಸಚಿವರಿಗೆ ಉಷ್ಣಾಂಶ ಪರೀಕ್ಷೆ, ಆಸನಗಳ ಮಧ್ಯೆ ಶೀಲ್ಡ್ , ನಡುವೆ ಅಂತರ ಕಲ್ಪಿಸಲಾಗಿದೆ. ಅಲ್ಲದೆ, 20 ಅಧಿಕಾರಿಗಳಿಗೆ ಮಾತ್ರ ಸದನಕ್ಕೆ ಹಾಜರಾಗಲು ಅವಕಾಶ ನೀಡಿದ್ದು ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಸುಗಮ ಅಧಿವೇಶನಕ್ಕಾಗಿ ಕೈಗೊಳ್ಳಲಾಗಿದೆ.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm