ಮಂಡ್ಯ ; ದೇವಸ್ಥಾನದಲ್ಲಿ ಕುಸಿದುಬಿದ್ದು  ಗರ್ಭಿಣಿ ಸಾವು 

05-03-22 08:46 pm       HK Desk news   ಕರ್ನಾಟಕ

ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.

ಮಂಡ್ಯ, ಮಾ. 05: ಮಳವಳ್ಳಿ ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಾಮದ ಉಮೇಶ್ ಎಂಬುವರ ಪತ್ನಿ ಪಂಕಜಾ (26) ಮೃತರು.

 ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಕರ ಸಲಹೆಯಂತೆ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಪತಿ ಉಮೇಶ್ ಕುಟುಂಬದವರ ಜತೆಗೂಡಿ ಕಾರಿನಲ್ಲಿ ಆಗಮಿಸಿದ್ದರು.

 ದೇವಸ್ಥಾನದಲ್ಲಿ ಪೂಜೆ ಮುಗಿಸಿ  ಹೊರಡುವ ಸಮಯದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಕೂಡಲೇ ತಲಕಾಡು ಸರ್ಕಾರಿ ಆಸ್ಪತ್ರೆ ಕರೆದೊಯ್ಯಲಾಯಿತು. ಆದ್ರೆ ಅಷ್ಟರಲ್ಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಯಿತು. ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Eight month old pregnant woman dies after collapsing in temple in Mandya. The deceased has been identified as Pankaja.