ಬ್ರೇಕಿಂಗ್ ನ್ಯೂಸ್
05-03-22 09:07 pm HK Desk news ಕರ್ನಾಟಕ
ಹಾವೇರಿ, ಮಾ 05: ಉಕ್ರೇನ್ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.
ಇಂದು ನವೀನ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ದಾಳಿಗೆ ಉಕ್ರೇನ್ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಉಕ್ರೇನ್ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಣೆ:
ಉಕ್ರೇನ್ನಲ್ಲಿ ರಷ್ಯಾದ ಬಾಂಬ್ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.
Chief Minister Basavaraj Bommai meets the family of Naveen SG, the Karnataka medical student who was killed in Ukraine recently. The Chief Minister handed over a cheque of Rs 25 lakh to the bereaved family members of the victim.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am