ಬ್ರೇಕಿಂಗ್ ನ್ಯೂಸ್
05-03-22 09:07 pm HK Desk news ಕರ್ನಾಟಕ
ಹಾವೇರಿ, ಮಾ 05: ಉಕ್ರೇನ್ನಲ್ಲಿ ಬಾಂಬ್ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.
ಇಂದು ನವೀನ್ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ದಾಳಿಗೆ ಉಕ್ರೇನ್ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಉಕ್ರೇನ್ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ವಿತರಣೆ:
ಉಕ್ರೇನ್ನಲ್ಲಿ ರಷ್ಯಾದ ಬಾಂಬ್ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ನವೀನ್ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.
Chief Minister Basavaraj Bommai meets the family of Naveen SG, the Karnataka medical student who was killed in Ukraine recently. The Chief Minister handed over a cheque of Rs 25 lakh to the bereaved family members of the victim.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm