ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm