ಬ್ರೇಕಿಂಗ್ ನ್ಯೂಸ್
07-03-22 05:25 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.7: ತಮಿಳುನಾಡಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿರುವ ಮುಜರಾಯಿ ಸಚಿವ ಶೇಖರ್ ಬಾಬು ಅವರ ಮಗಳು ತನ್ನ ಪ್ರಿಯಕರನ ಜೊತೆಗೆ ಪರಾರಿಯಾಗಿರುವ ಪ್ರಕರಣ ಈಗ ಬೆಂಗಳೂರು ತಲುಪಿದೆ. ಯುವತಿ ಹಾಗೂ ಆಕೆಯ ಪ್ರಿಯಕರ ಸತೀಶ್ ಕುಮಾರ್ ಕನ್ನಡ ಸಂಘಟನೆಗಳ ಆಶ್ರಯ ಪಡೆದು ಬೆಂಗಳೂರಿನಲ್ಲಿ ಪೊಲೀಸರ ಮುಂದೆ ಕಾಣಿಸಿಕೊಂಡಿದ್ದಾರೆ.
ಸಚಿವರ ಮಗಳನ್ನು ಯುವಕ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ. ಆನಂತರ ಕನ್ನಡ ಸಂಘಟನೆಗಳ ನಾಯಕರ ಆಶ್ರಯ ಪಡೆದು ಬೆಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿದ್ದಾರೆ. ತಮಗೆ ಜೀವ ಬೆದರಿಕೆ ಇದ್ದು ರಕ್ಷಣೆ ಕೊಡಿ ಎಂದು ಬೇಡಿಕೆ ಇಟ್ಟು ದೂರು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಯುವತಿ, ನಮಗೆ ತಮಿಳುನಾಡು ಪೊಲೀಸ್ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಕರ್ನಾಟಕಕ್ಕೆ ಬಂದಿದ್ದೇವೆ. ಅಲ್ಲಿಗೆ ಹೋದ್ರೆ ನಮ್ಮನ್ನು ಕೊಲೆ ಮಾಡ್ತಾರೆ. ಯೂ ಟ್ಯೂಬ್ ನಲ್ಲಿ ಕನ್ನಡ ಸಂಘಟನೆ ಸರ್ಚ್ ಮಾಡಿದ್ದೆ. ಆಗ ಭರತ್ ಶೆಟ್ಟಿ, ಮಧುಗಿರಿ ಮೋದಿ ಅಂತ ತೋರಿಸ್ತು. ಹಾಗೆ ಅವರನ್ನ ಸಂಪರ್ಕ ಮಾಡಿ ಬಂದಿದ್ದೇನೆ ಎಂದು ಹೇಳಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಅವರ ರೈಟ್ ಹ್ಯಾಂಡ್ ಆಗಿದ್ದಾರೆ ನನ್ನ ತಂದೆ. ತಂದೆ ಶೇಖರ್ ಬಾಬು ಹೇಳಿದ ಹಾಗೆ ಪೊಲೀಸರು ಕೇಳ್ತಾರೆ. ಈಗಾಗಲೇ ಸತೀಶ್ ಕುಮಾರ್ ಮನೆಯವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿ ಕಮಿಷನರ್ ಸಂಜೆ ಬರಲು ಹೇಳಿದ್ದಾರೆ. ನಾನು ಎಂಬಿಬಿಎಸ್ ಮಾಡಿದೀನಿ, ಸತೀಶ್ ಟ್ರಾನ್ಸ್ಪೋರ್ಟ್ ಬ್ಯುಸಿನೆಸ್ ಮಾಡ್ತಿದಾನೆ. ನಮ್ಮನ್ನು ಬದುಕಲು ಬಿಡಿ ಎಂದು ಯುವತಿ ಅಂಗಲಾಚಿದ್ದಾಳೆ.
Tamil Nadu Minister Sekar Babu daughter seeks help of Karnataka police after she gets married to her lover. She flee with her lover to Bangalore and has seeked help of Kannada Pro Organisations.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am