ಬ್ರೇಕಿಂಗ್ ನ್ಯೂಸ್
08-03-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮಾ.8: ಇತ್ತೀಚೆಗೆ ರಾಜಕೀಯ ದ್ವೇಷದ ಕಾರಣಕ್ಕೆ ಅತಿ ಹೆಚ್ಚು ಹತ್ಯೆಗಳು ನಡೆಯುತ್ತಿವೆ. ತನ್ನ ದಾರಿಗೆ ಅಡ್ಡಿ ಎಂಬ ಕಾರಣಕ್ಕಾಗಿ ಇನ್ನೊಬ್ಬನ ಹತ್ಯೆ ನಡೆಯುತ್ತಿರುವುದು ಅತ್ಯಂತ ಅಪಾಯಕಾರಿ ಮತ್ತು ಆಘಾತಕಾರಿ ಬೆಳವಳಣಿಗೆ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಗ್ರಾಮ ಪಂಚಾಯಿತಿ ಸದಸ್ಯನಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ರಾಜಕೀಯ ಕಾರಣಗಳಿಗೆ ಹತ್ಯೆ ನಡೆಯುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿ ವಿಚಾರಣೆ ಮುಂದೂಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರೋಪಿ ಪರ ವಕೀಲರು, ಅರ್ಜಿದಾರರು ಗ್ರಾಮ ಪಂಚಾಯತಿ ಸದಸ್ಯರಾಗಿದ್ದಾರೆ ಎಂಬ ಕಾರಣಕ್ಕೆ ವಿಚಾರಣಾ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿದೆ. ಆದರೆ ಅರ್ಜಿದಾರರನ್ನು ಅನಗತ್ಯವಾಗಿ ಬಂಧಿಸಿಡಲಾಗಿದೆ. ಆದ್ದರಿಂದ ಆರೋಪಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಯಾವುದೇ ಪ್ರಕರಣದಲ್ಲಿ ಸುಖಾಸುಮ್ಮನೆ ಯಾರನ್ನೂ ಬಂಧಿಸುವುದಿಲ್ಲ. ಹಾಗೆ ಬಂಧಿಸಿದರೆ ಅದು ಅಕ್ರಮ ಬಂಧನವಾಗುತ್ತದೆ. ಈ ಪ್ರಕರಣದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ನಾವು ಎಷ್ಟೇ ಪ್ರಯತ್ನಿಸಿದರೂ ಆತನನ್ನು ಬದುಕಿಸಲಾಗದು. ಇತ್ತೀಚೆಗೆ ಹೆಚ್ಚು ಕೊಲೆಗಳು ನಡೆಯುತ್ತಿರುವುದೇ ಮೂರು ಕಾರಣಗಳಿಗೆ. ಅನೈತಿಕ ಸಂಬಂಧ, ಯಾವುದಾದರೂ ಲಾಭಕ್ಕಾಗಿ, ಇಲ್ಲವೇ ರಾಜಕೀಯ ದ್ವೇಷಕ್ಕೆ. ಈ ಕಾರಣ ಇರದಿದ್ದರೆ ಅಷ್ಟು ಸುಲಭದಲ್ಲಿ ಹತ್ಯೆಗಳು ನಡೆಯುವುದಿಲ್ಲ.
ಓರ್ವ ವ್ಯಕ್ತಿ ತನ್ನ ಬೆಳವಣಿಗೆಗೆ ಅಡ್ಡಿಯಾಗಿದ್ದಾನೆ. ಆತನನ್ನು ಮುಗಿಸಿದರೆ ಸರಿಹೋಗುತ್ತದೆ ಎಂಬುದು ಮನಸ್ಸಿಗೆ ಬಂದರೆ, ಕೊಲೆಗಳು ನಡೆದು ಹೋಗುತ್ತವೆ. ಜೈಲಿನಿಂದ ಬಂದ ನಂತರವೂ ನನ್ನ ಎದುರು ಹಾಕಿಕೊಂಡವನ ಕಥೆ ಏನಾಯಿತು ನೋಡು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾನೆ. ಈ ಕಾರಣಕ್ಕೆ ಗ್ರಾಮ ಪಂಚಾಯಿತಿ ಹಂತದಲ್ಲಿ ರಾಜಕೀಯ ಪಕ್ಷಗಳನ್ನು ಹೊರಗಿಡಲಾಗಿದೆ. ಹಾಗಿದ್ದರೂ ಇಂದು ಗ್ರಾಮಗಳಲ್ಲಿ ರಾಜಕೀಯ ತಲುಪಿದ್ದು ದ್ವೇಷ ರಾಜಕಾರಣವೂ ಹೆಚ್ಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
The High Court is deeply concerned that the killing of another is a very dangerous and traumatic day for the disruption of its path.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am