ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm