ಬ್ರೇಕಿಂಗ್ ನ್ಯೂಸ್
12-03-22 10:49 am HK Desk news ಕರ್ನಾಟಕ
ತಮಕೂರು, ಮಾ.12: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ನಿರಾಸೆಯೂ ಆಗಿದೆ. ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆ ಆಗುತ್ತಿದೆ ಎಂಬ ವಾತಾವರಣ ಇದೆ. ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ. ಇಂಥ ಸಂದರ್ಭದಲ್ಲೂ ಜನರು ಬಿಜೆಪಿಗೆ ಮತ ಹಾಕುತ್ತಾರೆ ಎಂದರೆ ಏನೋ ಕಾರಣ ಇರಬಹುದು. ಅಥವಾ ಕಾಂಗ್ರೆಸ್ ಚುನಾವಣೆ ಮಾಡುವ ರೀತಿಯೇ ಸರಿ ಇಲ್ಲವೋ ಏನೋ ಗೊತ್ತಾಗುತ್ತಿಲ್ಲ. ಸೋಲಿಗೆ ನಾವು ಕಾರಣ ಹುಡುಕಬೇಕಾಗಿದೆ.
ಹೀಗೆಂದು ಪ್ರತಿಕ್ರಿಯಿಸಿದ್ದಾರೆ, ಮಾಜಿ ಸಚಿವ ಪರಮೇಶ್ವರ್. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ಬಿಜೆಪಿ, ಎಸ್ ಪಿಗಿಂತ ಹೆಚ್ಚು ರ್ಯಾಲಿ ಮಾಡಿದ್ರು. ಜನರನ್ನು ತಲುಪುವ ಪ್ರಯತ್ನ ಮಾಡಿದ್ರು. ಆದರೂ ಮತ ಬೇರೆಯವರಿಗೆ ಹೋಗಿದೆ. ಇದನ್ನು ನಾವು ಆಂತರಿಕವಾಗಿ ವಿಶ್ಲೇಷಣೆ ಮಾಡಬೇಕು.
2024 ರ ಲೋಕಸಭಾ ಚುನಾವಣೆ ಟರ್ನಿಂಗ್ ಪಾಯಿಂಟ್. ಈ ದೇಶದ ಅಭಿವೃದ್ಧಿ, ಬೆಳವಣಿಗೆ ಕಾರಣದಿಂದ 2024ರ ಚುನಾವಣೆ ಬಹಳ ಮುಖ್ಯ.. ಅಷ್ಟರ ಒಳಗೆ ನಾವು ನಮ್ಮ ಮನೆಯನ್ನು ಸರಿಪಡಿಸಿಕೊಳ್ಳಬೇಕು. ನಮ್ಮ ತಪ್ಪಗಳನ್ನು ತಿದ್ದಿಕೊಳ್ಳಬೇಕು. ಸ್ಥಳೀಯವಾಗಿ ಲೀಡರ್ ಶಿಪ್ ಸರಿಪಡಿಸಿಕೊಳ್ಳಬೇಕು ಎಂದು ಹೇಳಿದರು.
ಇವಿಎಂ ಬಗ್ಗೆ ನನಗೆ ಅನುಮಾನ ಈಗಲೂ ಇದೆ. ಇವಿಎಂ ಅನ್ನು ಮ್ಯಾನುಪ್ಲೆಟ್ ಮಾಡುವ ಟೆಕ್ನಾಲಜಿ ಅವರು ಇಟ್ಟಕೊಂಡಿದ್ದಾರೆ. ಬೇರೆ ಬೇರೆ ದೇಶದಿಂದ ಅದನ್ನು ಆಪರೇಟ್ ಮಾಡುತ್ತಾರೆ ಎಂದು ಕೇಳಿದ್ದೇವೆ. ನನಗೂ ಕೂಡ ಅನೇಕ ಬಾರಿ ಆ ರೀತಿ ಅನಿಸಿದೆ. ತಂತ್ರಜ್ಞರು ಹೇಳಿಕೆ ನೋಡಿದರೆ ಇವಿಎಂ ಹ್ಯಾಕ್ ಆಗಿರಬಹುದು ಅನಿಸುತ್ತದೆ. ಆದರೆ ನಾವು ಅದನ್ನು ಕೇವಲ ಆರೋಪ ಅಷ್ಟೇ ಮಾಡಬಹುದು,
ಸ್ಪಷ್ಟವಾಗಿ ನಮಗೂ ಗೊತ್ತಿಲ್ಲ. ಉತ್ತರ ಪ್ರದೇಶದಲ್ಲೂ ಹ್ಯಾಕ್ ಆಗಿರಬಹುದು. ಯಾಕೆ ಆಗಬಾರದು, ಉತ್ತರ ಪ್ರದೇಶ 80 ಲೋಕಸಭಾ ಸದಸ್ಯರಿರುವ ರಾಜ್ಯ. ಹಾಗಾಗಿ ಆ ರಾಜ್ಯದಲ್ಲಿ ಆಡಳಿತಕ್ಕೆ ಬಂದರೆ ಸಂಸತ್ ಚುನಾವಣೆ ಸುಲಭವಾಗುತ್ತದೆ ಎನ್ನುತ್ತಾರೆ. ಹಾಗಾಗಿ ಅಲ್ಲಿ ಕೂಡ ಯಾಕೆ ಹ್ಯಾಕ್ ಮಾಡಿರಬಾರದು ಎಂಬ ಪ್ರಶ್ನೆನೂ ಬರುತ್ತದೆ. ಹೀಗಾಗಿ ಚುನಾವಣೆಗೆ ಬ್ಯಾಲೇಟ್ ಪೇಪರ್ ಮತ್ತೆ ತರಬೇಕು ಎಂದು ಒತ್ತಾಯ ಮಾಡುತ್ತೇನೆ..
ಡಿಕೆ ಶಿವಕುಮಾರ್ ಗೆ ಫ್ರೀ ಹ್ಯಾಂಡ್ ಸಿಕ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಡಿ.ಕೆ ಶಿವಕುಮಾರ್ ಸ್ವತಂತ್ರವಾಗಿದ್ದಾರೆ. ಅವರಿಗೆ ಯಾವುದೇ ಕಂಟ್ರೋಲ್ ಇಲ್ಲ,ಅವರು ಒಳ್ಳೆ ಕೆಲಸ ಮಾಡುತಿದ್ದಾರೆ. ಪ್ರಮುಖ ನಿರ್ಧಾರವನ್ನು ಎಲ್ಲರ ಜೊತೆ ಚರ್ಚೆ ಮಾಡಿ ಮಾಡುತ್ತಾರೆ.. ಮೇಕೆದಾಟು ಪಾದಯಾತ್ರೆ ಮಾಡುವಾಗ ಎಲ್ಲರ ಜೊತೆ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸಿಎಂ ಅಭ್ಯರ್ಥಿ ವಿಚಾರ ಅಪ್ರಸ್ತುತ. ಎಲ್ಲರೂ ಮೊದಲು ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
Tumakuru Need to find the reason for Congress losing elections need to correct our mistakes says Congress leader G Parameshwara
04-05-24 10:13 pm
HK News Desk
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
Covishield vaccine, Dinesh Gundurao: ಕೋವಿಶೀಲ್...
04-05-24 04:04 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 01:26 pm
Mangalore Correspondent
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
04-05-24 11:03 pm
HK News Desk
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am