ಬ್ರೇಕಿಂಗ್ ನ್ಯೂಸ್
12-03-22 08:00 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12 : ವಿಧಾನ ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಕೊನೆಗೂ ಕಾಂಗ್ರೆಸ್ ತೊರೆದಿದ್ದಾರೆ. ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಕಾರಣಕ್ಕೆ ಕಾಂಗ್ರೆಸ್ ಬಿಡುತ್ತಿರುವುದಾಗಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ವಿಧಾನ ಪರಿಷತ್ನಲ್ಲಿ 18 ಸದಸ್ಯರ ಬೆಂಬಲ ನನಗೆ ಇತ್ತು. ಆದರೆ, ಪರಿಷತ್ ಸದಸ್ಯರಲ್ಲೇ ಕಿರಿಯರಾದ ಬಿ.ಕೆ. ಹರಿಪ್ರಸಾದ್ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನೇಮಿಸಲಾಗಿದೆ. ಪಕ್ಷದ ಬೆಳವಣಿಗೆಗಳ ಕುರಿತು ತಮ್ಮನ್ನು ಭೇಟಿಯಾಗಿ ಚರ್ಚಿಸಲು ಅವಕಾಶವೇ ದೊರೆಯಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಪತ್ರವನ್ನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖಾಂತರ ಸಭಾಪತಿಯವರಿಗೆ ಕಳುಹಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಕ್ಕೆ ಜಾಗವಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದೇನೆ. ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಧ್ವನಿ ಎತ್ತಿದ ಬಳಿಕ ಯು.ಟಿ. ಖಾದರ್ ಅವರಿಗೆ ವಿಧಾನಸಭೆ ವಿರೋಧಪಕ್ಷದ ಉಪ ನಾಯಕನ ಸ್ಥಾನ ನೀಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
‘ಸಿದ್ದರಾಮಯ್ಯ ಅವರಿಗಾಗಿ ಕಾಂಗ್ರೆಸ್ ಸೇರಿದ್ದೆ. ಅವರೇ ನಡು ನೀರಿನಲ್ಲಿ ಕೈಬಿಟ್ಟರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ. ನಾನು ದೇವೇಗೌಡರ ಮನೆಗೆ ಹೋದರೆ ಇವರಿಗೆ ಉರಿಯುತ್ತದೆ. ಶಾಮನೂರು ಶಿವಶಂಕರಪ್ಪ, ಬಿ.ಎಸ್. ಯಡಿಯೂರಪ್ಪ ಪರ ಹೇಳಿಕೆ ಕೊಟ್ಟರೆ ಆಗೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior Congress leader and MLC CM Ibrahim on Saturday said he has resigned from the primary membership of the party, and was inclined to join the JD(S). The senior politician, however, said he will announce his decision to join the regional party after discussing with the JD(S) leadership, including former Prime Minister HD Deve Gowda, in a couple of days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm