ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am