ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm