ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm