ಬ್ರೇಕಿಂಗ್ ನ್ಯೂಸ್
12-03-22 09:15 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12: ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಹುಡುಗನನ್ನು ಆಧಾರ್ ಕಾರ್ಡಿನ ಬೆರಳಚ್ಚು ಮತ್ತೆ ತಾಯಿ ಮಡಿಲು ಸೇರಿಸಿದ ಘಟನೆ ಬೆಳಕಿಗೆ ಬಂದಿದೆ. 2016ರಲ್ಲಿ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಹತ್ತು ವರ್ಷದ ಹುಡುಗ ಭರತ್ ಕುಮಾರ್ ಮತ್ತೆ ತಾಯಿ ಮಡಿಲು ಸೇರಿದ್ದಾನೆ.
ಯಲಹಂಕದಲ್ಲಿ ಬೀದಿ ಬದಿ ತರಕಾರಿ ಮಾರುತ್ತಿದ್ದ ಪಾರ್ವತಮ್ಮ 2016ರಲ್ಲಿ ತನ್ನ ಮಗ ಭರತ್ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ತನ್ನ ಮಗನನ್ನು ಯಾರೋ ಅಪಹರಣ ಮಾಡಿದ್ದಾರೆ, ಆತನಿಗೆ ಮಾತು ಬರುವುದಿಲ್ಲ ಎಂದು ದೂರಿನಲ್ಲಿ ಹೇಳಿದ್ದರು. ಆನಂತರ ಪೊಲೀಸರನ್ನು ಸಾಕಷ್ಟು ಬಾರಿ ಎಡತಾಕಿದರೂ, ಭರತ್ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ.
ಆನಂತರ, ಹತ್ತು ತಿಂಗಳ ಬಳಿಕ ಭರತ್ ಕುಮಾರ್ ಮಹಾರಾಷ್ಟ್ರದ ನಾಗಪುರಕ್ಕೆ ತಲುಪಿದ್ದ. ಬೆಂಗಳೂರಿನಿಂದ ರೈಲಿನಲ್ಲಿ ತೆರಳಿದ್ದ ಆತನನ್ನು ಅಲ್ಲಿನ ಪೊಲೀಸರು ಮಾಹಿತಿ ಕೇಳಿದ್ದರು. ಆನಂತರ, ಸರಿಯಾದ ಮಾಹಿತಿ ಸಿಗದೆ ಹುಡುಗನನ್ನು ಪೊಲೀಸರು ಪುನರ್ವಸತಿ ಕೇಂದ್ರಕ್ಕೆ ಹಾಕಿದ್ದರು. ಕೇಂದ್ರದ ಸಿಬಂದಿ ಇತ್ತೀಚೆಗೆ ಭರತ್ ಕುಮಾರನ ಆಧಾರ್ ಕಾರ್ಡ್ ಮಾಡಿಸಲು ಯತ್ನಿಸಿದ್ದರು. ಆದರೆ ಆಧಾರ್ ಕಾರ್ಡ್ ಮಾಡಿಸಲು ಬೆರಳಚ್ಚು ನೀಡಿದಾಗ, ಭರತ್ ಕುಮಾರ್ ಅದಾಗಲೇ ಕಾರ್ಡ್ ಮಾಡಿಸಿರುವುದು ಕಂಡುಬಂದಿದೆ.
ಭರತ್ ಕುಮಾರ್ ವಿಳಾಸ ಬೆಂಗಳೂರಿನಲ್ಲಿರುವುದನ್ನು ಆಧಾರ್ ತೋರಿಸಿದ್ದು, ಪುನರ್ವಸತಿ ಕೇಂದ್ರದ ಸಿಬಂದಿ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಾಗಪುರ ಪೊಲೀಸರು ಬಳಿಕ ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದು, ವಿಳಾಸದ ಮೂಲಕ ತಾಯಿಯನ್ನು ಸಂಪರ್ಕಿಸಿದ್ದಾರೆ. ಇದೀಗ ತಾಯಿ ಪಾರ್ವತಮ್ಮ ನಾಗಪುರಕ್ಕೆ ತೆರಳಿ, ತನ್ನ ಮಗನನ್ನು ಪತ್ತೆ ಮಾಡಿದ್ದಾರೆ. ಆಧಾರ್ ಕಾರ್ಡ್ ಚಹರೆ ತನ್ನ ಮಗನನ್ನು ಪತ್ತೆ ಮಾಡಿಸಿದ್ದಕ್ಕೆ ತಾಯಿ ಕೃತಜ್ಞತೆ ಹೇಳಿದ್ದಾರೆ.
In a joint operation, authorities in Karnataka and Maharashtra managed to reunite a speech impaired boy with his mother after six years with the help of fingerprints on an Aadhaar card.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm