ಬ್ರೇಕಿಂಗ್ ನ್ಯೂಸ್
15-03-22 11:44 am Bengalore Correspondent ಕರ್ನಾಟಕ
ಬೆಂಗಳೂರು, ಮಾ.15: ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು ಹಿಜಬ್ ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಬಳಿಕ ಇಡೀ ರಾಜ್ಯಕ್ಕೆ ಹಬ್ಬಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಸತತ 13 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಆಧರಿತ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ತೀರ್ಪು ನೀಡಿದೆ. ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡಲು ಅವಕಾಶ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
In an important verdict on Tuesday, the Karnataka High Court dismissed various petitions challenging a ban on Hijab in education institutions. The full bench of the HC concluded its hearing in the Hijab case saying that wearing the Hijab is not a part of essential religious practices in Islam.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm