ಬ್ರೇಕಿಂಗ್ ನ್ಯೂಸ್
15-03-22 11:44 am Bengalore Correspondent ಕರ್ನಾಟಕ
ಬೆಂಗಳೂರು, ಮಾ.15: ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು ಹಿಜಬ್ ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಬಳಿಕ ಇಡೀ ರಾಜ್ಯಕ್ಕೆ ಹಬ್ಬಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಸತತ 13 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಆಧರಿತ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ತೀರ್ಪು ನೀಡಿದೆ. ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡಲು ಅವಕಾಶ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
In an important verdict on Tuesday, the Karnataka High Court dismissed various petitions challenging a ban on Hijab in education institutions. The full bench of the HC concluded its hearing in the Hijab case saying that wearing the Hijab is not a part of essential religious practices in Islam.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am