ಬ್ರೇಕಿಂಗ್ ನ್ಯೂಸ್
21-09-20 07:21 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 21: ವಿಧಾನಸಭೆಯ ಮೊಗಸಾಲೆಯಲ್ಲಿ ತೋಟಗಾರಿಕೆ ಸಚಿವ ನಾರಾಯಣ ಗೌಡ ಮತ್ತು ಚಿಕ್ಕಮಗಳೂರಿನ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಅನುದಾನದ ವಿಚಾರದಲ್ಲಿ ಜಗಳವಾಡಿ, ಕೈಕೈ ಮಿಲಾಯಿಸಿಕೊಂಡ ಘಟನೆ ನಡೆದಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ವಿಧಾನಸಭೆ ಅಧಿವೇಶನ ನಡುವೆ ಟೀ ವಿರಾಮದ ಮಧ್ಯೆ ಕ್ಯಾಂಟೀನ್ ಆಗಮಿಸಿದ್ದ ಬೆಳ್ಳಿ ಪ್ರಕಾಶ್, ಅತ್ತ ಸಚಿವ ನಾರಾಯಣ ಗೌಡ ಒಳಬರುತ್ತಿದ್ದಂತೆ ಪ್ರಶ್ನೆ ಮಾಡಿದ್ದಾರೆ. ಮಾಸ್ಕ್ ಹಾಕಿಕೊಂಡು ಮಾತಾಡು ಎಂದು ನಾರಾಯಣ ಗೌಡ ಪ್ರತಿಕ್ರಿಯಿಸಿದ್ದಕ್ಕೆ ಏರಿಹೋದ ಬೆಳ್ಳಿ ಪ್ರಕಾಶ್, ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾರೆ. ಮಾತಿಗೆ ಮಾತು ಬೆಳೆದು ಇಬ್ಬರೂ ತಳ್ಳಾಡಿಕೊಂಡಿದ್ದು, ಸ್ಥಳದಲ್ಲಿದ್ದ ಜೆಡಿಎಸ್ ಶಾಸಕ ಅನ್ನದಾನಿ ಸೇರಿದಂತೆ ಸಿಬಂದಿ ಸೇರಿ ಜಗಳ ಬಿಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ಸೋಮಣ್ಣ ಮತ್ತಿತರರು ಕ್ಯಾಂಟೀನ್ ನಲ್ಲಿ ಇರುವಾಗಲೇ ಘಟನೆ ನಡೆದಿದ್ದು, ಆಡಳಿತ ಪಕ್ಷ ಬಿಜೆಪಿಗೆ ಮುಜುಗರ ಉಂಟುಮಾಡುವಂತೆ ಮಾಡಿದೆ. ಅಧಿವೇಶನದ ಬಳಿಕ ಪತ್ರಕರ್ತರು ಸಚಿವ ನಾರಾಯಣ ಗೌಡರನ್ನು ಈ ಬಗ್ಗೆ ಪ್ರಶ್ನೆ ಮಾಡಿದಾಗ, ಜಗಳ ಏನು ನಡೆದಿಲ್ಲ. ಪ್ರಕಾಶ್ ಏಕವನಚನದಲ್ಲಿ ಮಾತನಾಡಿದ್ದು ಬೇಜಾರಾಯ್ತು. ವರ್ಗಾವಣೆ ವಿಚಾರದಲ್ಲಿ ಮಾತಾಡಲು ಬಂದಿದ್ದರು. ಹಾಗೆಲ್ಲಾ ಮಾತಾಡೋದು ಸರಿ ಕಾಣಲ್ಲ ಎಂದು ಹೇಳಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm