ಬ್ರೇಕಿಂಗ್ ನ್ಯೂಸ್
15-03-22 09:17 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.15: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ನಿಬಾ ನಾಝ್ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ವಕೀಲ ಅನಾಸ್ ತನ್ವೀರ್ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಅಲ್ಲಿನ ತಳಮಟ್ಟದ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳುವಲ್ಲಿ ಸೋತಿದೆ. ಸಂವಿಧಾನದ ಮೂಲಭೂತ ಹಕ್ಕಾದ ಆರ್ಟಿಕಲ್ 25ರ ಉಲ್ಲೇಖಿತ ಧಾರ್ಮಿಕ ಹಕ್ಕನ್ನು ಉದ್ದೇಶಪೂರ್ವಕ ಕಡೆಗಣಿಸಿ ತೀರ್ಪು ನೀಡಲಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

1983 ರ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೀತಿಗಳು, 1995ರ ಕಾಯ್ದೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಸಮವಸ್ತ್ರ ಕಡ್ಡಾಯದ ಬಗ್ಗೆ ಉಲ್ಲೇಖ ಇಲ್ಲ. ಅಲ್ಲದೆ ಈ ನೀತಿಗಳು ಪ್ರಾಥಮಿಕ ಶಾಲೆಗಳಿಗೆ ಹೊರತು ಪಿಯು ಕಾಲೇಜುಗಳಿಗೆ ಅನ್ವಯ ಆಗಲ್ಲ. ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವುದಕ್ಮೆ ನಿರ್ದಿಷ್ಟ ಕಾನೂನು ಇಲ್ಲ. ಸಮವಸ್ತ್ರ ಧರಿಸದೇ ಇರುವವರಿಗೆ ಶಿಕ್ಷೆ ನೀಡಲು ಕಾನೂನು ಇಲ್ಲದ ಹೊರತು ಅದನ್ನು ಕಡ್ಡಾಯ ಪಡಿಸುವುದಕ್ಕೆ ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ಅರ್ಜಿಯಲ್ಲಿ ಪ್ರಶ್ನೆ ಮಾಡಲಾಗಿದೆ.
ಕಾಲೇಜು ಅಭಿವೃದ್ಧಿ ಸಮಿತಿ ರೂಪಿಸಲು ಶಿಕ್ಷಣ ಕಾಯ್ದೆಯಲ್ಲಿ ನಿರ್ದಿಷ್ಟ ಕಾನೂನು ಇಲ್ಲ. ಹಾಗಿದ್ದ ಮೇಲೆ ಸಮವಸ್ತ್ರ ನಿರ್ಧರಿಸುವುದಕ್ಕೆ ಅವುಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಫೆ.5 ರಂದು ರಾಜ್ಯ ಸರಕಾರ ಸಮವಸ್ತ್ರ ಕಡ್ಡಾಯ ಮಾಡಿ ಆದೇಶಿಸಿರುವುದು ಇಲ್ಲದ ಅಧಿಕಾರವನ್ನು ಬಳಸಿದಂತಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಅಲ್ಪಸಂಖ್ಯಾತರ ಹಕ್ಕು, ನಂಬಿಕೆಗಳನ್ನು ಮೊಟಕುಗೊಳಿಸುವ ಉದ್ದೇಶದಿಂದಲೇ ಈ ರೀತಿಯ ಆದೇಶ ಮಾಡಲಾಗಿತ್ತು. ಮಕ್ಕಳಿಗೆ ನಿಯಮ ಹೇರುವುದರ ಹೆತ್ತವರ ನಂಬಿಕೆಯನ್ನು ಹುಸಿಗೊಳಿಸುವ ಪ್ರಯತ್ನ ಇದರ ಹಿಂದಿದೆ ಎಂದು ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಗಮನ ಸೆಳೆಯಲಾಗಿದೆ.
The appeal has been filed against the Karnataka High Court order that held that the petitioners’ pleas against the hijab ban are ‘devoid of merit’ and so are not maintainable.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm