ಬ್ರೇಕಿಂಗ್ ನ್ಯೂಸ್
16-03-22 05:39 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.16: ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿರುವ ತೀರ್ಪನ್ನು ವಿರೋಧಿಸಿ ಮಾ.17 ರಂದು ರಾಜ್ಯ ಬಂದ್ ನಡೆಸಲು ಮುಸ್ಲಿಂ ಸಂಘಟನೆಗಳ ನಾಯಕರು ಕರೆ ನೀಡಿದ್ದಾರೆ. ಅಮೀರ್ ಇ- ಷರೀಯತ್ ಕರ್ನಾಟಕ ಎನ್ನುವ ಸಂಘಟನೆಯ ನಾಯಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶದಿ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನ ಸ್ವಯಂಪ್ರೇರಿತ ಬಂದ್ ನಡೆಸುವಂತೆ ಹೇಳಿದ್ದಾರೆ.
ಅಮೀರ್ ಇ -ಷರೀಯತ್ ಎನ್ನುವುದು ರಾಜ್ಯದಲ್ಲಿ ಎಲ್ಲ ಮುಸ್ಲಿಂ ಸಂಘಟನೆಗಳ ಪೈಕಿ ಪ್ರಮುಖವಾಗಿದ್ದು ಇದರ ಮುಖ್ಯಸ್ಥರ ಕರೆಯನ್ನು ಓಗೊಟ್ಟು ಇತರ ಸಂಘಟನೆಗಳ ನಾಯಕರು ಬಂದ್ ಬೆಂಬಲಿಸಲು ಕರೆ ನೀಡುತ್ತಿದ್ದಾರೆ. ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿರುವುದನ್ನು ಸಂಘಟನೆಗಳ ನಾಯಕರು ವಿರೋಧಿಸಿದ್ದಾರೆ.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಅರ್ಜಿಯನ್ನು ಕೂಡಲೇ ಪರಿಗಣಿಸಲು ಕೋರ್ಟ್ ನಿರಾಕರಿಸಿತ್ತು. ಅಲ್ಲದೆ, ಹೋಲಿ ರಜೆಯ ಬಳಿಕ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ವಿದ್ಯಾರ್ಥಿನಿಯರ ಬೆನ್ನಿಗೆ ನಿಂತಿದ್ದಾರೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸಭೆ ನಡೆಸಿದ ಮಸೀದಿ ಕಮಿಟಿಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ನಾಯಕರು ಕೋರ್ಟ್ ತೀರ್ಪನ್ನು ವಿರೋಧಿಸಿ ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಮುಸ್ಲಿಮರು ಎಲ್ಲ ವ್ಯಾಪಾರ, ವಹಿವಾಟುಗಳನ್ನು ಸ್ಥಗಿತಗೊಳಿಸಿ ಸಾತ್ವಿಕ ವಿರೋಧ ವ್ಯಕ್ತಪಡಿಸಬೇಕು. ಆದರೆ ಯುವಕರು ಸಂಯಮ ಕಾಪಾಡಬೇಕು. ಯಾರನ್ನೂ ಬಲವಂತದಿಂದ ಬಂದ್ ಮಾಡಲು ಮುಂದಾಗಬಾರದು. ಮೂಲೆ, ಮೂಲೆಯಲ್ಲಿರುವ ಎಲ್ಲ ರೀತಿಯ ಮುಸ್ಲಿಮರು ಸ್ವಯಂ ಆಗಿ ಬಂದ್ ಮಾಡಿ, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು ಎಂದು ನಾಯಕರು ಹೇಳಿದ್ದಾರೆ.
Ameer-e-Shariat of Karnataka (head priest) Maulana Sagheer Ahmad Khan Rashadi on Wednesday issued a call for a state-wide bandh on Thursday and called upon the community members to observe it peacefully.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm