ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm