ಬ್ರೇಕಿಂಗ್ ನ್ಯೂಸ್
22-09-20 10:42 am Headline Karnataka News Network ಕರ್ನಾಟಕ
ಮಡಿಕೇರಿ, ಸೆಪ್ಟಂಬರ್ 22: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ನಿನ್ನೆ ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.
2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮ್ ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm