ಬ್ರೇಕಿಂಗ್ ನ್ಯೂಸ್
19-03-22 09:05 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.19: ಮಾಗಡಿ ತಾಲೂಕಿನ ತಹಸೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಸಚಿವರಾದ ಅಶ್ವತ್ಥ ನಾರಾಯಣ ಮತ್ತು ಆರ್.ಅಶೋಕ್ ವಿಧಾನಸಭೆ ಮೊಗಸಾಲೆಯಲ್ಲೇ ಪರಸ್ಪರ ಕಿತ್ತಾಡಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಎರಡು ದಿನಗಳ ಹಿಂದೆ ನಡೆದಿರುವ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅಶ್ವತ್ಥ ನಾರಾಯಣ ಅವರು ಮಾಗಡಿ ತಾಲೂಕಿನ ತಹಸೀಲ್ದಾರ್ ಶ್ರೀನಿವಾಸ್ ಅವರನ್ನು ವರ್ಗಾವಣೆ ನಡೆಸುವಂತೆ ಕಂದಾಯ ಸಚಿವ ಅಶೋಕ್ ಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಶ್ರೀನಿವಾಸ್ ಬದಲಿಗೆ ಬೇರೂಬ್ಬ ಅಧಿಕಾರಿಯನ್ನು ನೇಮಕ ಮಾಡುವಂತೆ ಪತ್ರದಲ್ಲಿ ಕೇಳಿಕೊಂಡಿದ್ದರು. ಆದರೆ, ಕಂದಾಯ ಸಚಿವರು ಇದನ್ನು ಮಾನ್ಯ ಮಾಡದೆ ಆದೇಶ ಪತ್ರ ಹೊರಡಿಸಿರಲಿಲ್ಲ. ತಹಸೀಲ್ದಾರ್ ಆಗಿರುವ ಅಧಿಕಾರಿಗೆ ಪ್ರಭಾವಿ ಮಠಾಧೀಶರೊಬ್ಬರ ಬೆಂಬಲ ಇರುವುದರಿಂದ ವರ್ಗಾವಣೆ ಸಾಧ್ಯವಿಲ್ಲ ಎಂದು ಅಶೋಕ್ ತಿಳಿಸಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಇಬ್ಬರು ಸಚಿವರು ಕೂಡ ವಿಧಾನಸಭೆ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದು, ಸಚಿವ ಅಶ್ವತ್ಥ ನಾರಾಯಣ ತಹಸೀಲ್ದಾರ್ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನಾನೊಬ್ಬ ಅಲ್ಲಿನ ಉಸ್ತುವಾರಿ ಸಚಿವ. ನನ್ನ ಮಾತಿಗೆ ಅಷ್ಟೂ ಬೆಲೆ ಇಲ್ಲವೇ.. ಹಲವು ಬಾರಿ ಕೇಳಿಕೊಂಡರೂ ವರ್ಗಾವಣೆ ಮಾಡಲ್ಲ ಎಂದರೆ ಹೇಗೆ ಎಂದು ಏರಿದ ದನಿಯಲ್ಲಿ ಅಶೋಕ್ ಅವರನ್ನು ಪ್ರಶ್ನೆ ಮಾಡಿದ್ದಾರೆ.
ಇದರಿಂದ ಸಿಟ್ಟಾದ ಸಚಿವ ಅಶೋಕ್, ನನ್ನ ಇಲಾಖೆಯಲ್ಲಿ ಯಾರನ್ನು ಎಲ್ಲಿಗೆ, ಯಾವಾಗ ವರ್ಗಾವಣೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ. ನಾನು ಪಕ್ಷದಲ್ಲಿ ನಿಮಗಿಂತ ಹಿರಿಯವನು. ವರ್ಗಾವಣೆ ಬಗ್ಗೆ ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದೇ ವಿಚಾರದಲ್ಲಿ ಇಬ್ಬರು ಕೂಡ ಏಕವಚನದಲ್ಲಿ ನಿಂದಿಸಿಕೊಂಡಿದ್ದು, ನೀನು ನಿನ್ನ ಇಲಾಖೆಯಲ್ಲಿ ಏನೇನು ಮಾಡಿಕೊಂಡಿದ್ದೀಯ ಅನ್ನೋದು ಗೊತ್ತಿದೆ ಎಂದು ಪ್ರತಿಯಾಗಿ ಅಶ್ವತ್ಥ ನಾರಾಯಣ ನಿಂದಿಸಿದ್ದಾರೆ. ಅಲ್ಲದೆ, ಇಬ್ಬರೂ ಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದು, ಅಶ್ವತ್ಥ ನಾರಾಯಣ ಏರಿ ಬಂದಿದ್ದನ್ನು ನೋಡಿ ಅಶೋಕ್ ಕೂಡ ಎದ್ದು ನಿಂತಿದ್ದಾರೆ. ಈ ವೇಳೆ, ಅಲ್ಲಿದ್ದ ಇತರ ಸಚಿವರು, ಶಾಸಕರು ಇಬ್ಬರನ್ನೂ ಸಮಾಧಾನ ಪಡಿಸಿದ್ದಾರೆ.
Two senior ministers from Bengaluru, R Ashoka and CN Ashwath Narayan have been fighting off each other since 2019. The argument raged for some time after the transfer of two tahsildars from Ramanagara district.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm