ಬ್ರೇಕಿಂಗ್ ನ್ಯೂಸ್
22-09-20 12:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 22: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ಕನ್ನಡದ ಕಿರುತೆರೆ ನಟ-ನಟಿಯರು ಕೂಡ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರು 20ಕ್ಕೂ ಹೆಚ್ಚು ಮಂದಿ ಕಿರುತೆರೆ ನಟ-ನಟಿಯರಿಗೂ ನೋಟೀಸ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆಯಷ್ಟೆ ನಟ ಲೂಸ್ ಮಾದ ಮತ್ತು ಕ್ರಿಕೆಟಿಗ ಅಯ್ಯಪ್ಪ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದರು. ಮೊಬೈಲ್ ಶೋಧಿಸಿ, ಪಾರ್ಟಿ ಕುರಿತ ಮಾಹಿತಿಗಳನ್ನು ಪಡೆದು ಅವರನ್ನು ಬಿಟ್ಟಿದ್ದರು. ಇದಲ್ಲದೆ, ಕಿರುತೆರೆಯಲ್ಲಿ ನಟ-ನಟಿಯರಾಗಿರುವ 20ಕ್ಕೂ ಹೆಚ್ಚು ಮಂದಿಗೆ ಸಿಸಿಬಿ ನೋಟೀಸ್ ನೀಡಿದೆ ಎನ್ನಲಾಗುತ್ತಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿ ನಟಿ ಗೀತಾ ಭಾರತಿ ಭಟ್, ಗಟ್ಟಿಮೇಳ ಧಾರಾವಾಹಿಯಲ್ಲಿ ನಟಿಸಿದ್ದ ರಶ್ಮಿತಾ ಚೆಂಗಪ್ಪ ಮತ್ತು ಗಟ್ಟಿಮೇಳ ಧಾರಾವಾಹಿಯ ನಟ ಅಭಿಷೇಕ್ ಗೆ ಸೆ.22ರಂದು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ.


ಈ ಬಗ್ಗೆ ಹೇಳಿಕೆ ನೀಡಿರುವ ರಶ್ಮಿತಾ, ನನಗೆ ಸಿಸಿಬಿ ನೋಟೀಸ್ ನೀಡಿದ್ದಲ್ಲ. ಐಎಸ್ ಡಿಯವರು ನೋಟೀಸ್ ನೀಡಿದ್ದಾರೆ. ನೋಟೀಸ್ ನೀಡಿದ ಮಾತ್ರಕ್ಕೆ ಡ್ರಗ್ ವಹಿವಾಟಿನಲ್ಲಿ ತೊಡಗಿಸಿದ್ದೇನೆ ಎಂದರ್ಥವಲ್ಲ. ನನ್ನ ಹೆಸರು ಬಂದಿದ್ದಕ್ಕೆ ಶಾಕ್ ಆಗಿದೆ. ಕಳೆದ ವಾರವೂ ವಿಚಾರಣೆಗೆ ಕರೆದಿದ್ದರು. ಕೇಳಿದ ಮಾಹಿತಿಗಳನ್ನು ನೀಡಿದ್ದೆ. ಖಚಿತ ಮಾಹಿತಿ ಇಲ್ಲದೆ ಡ್ರಗ್ಸ್ ವಿಚಾರದಲ್ಲಿ ಹೆಸರು ಬಂದಿದ್ದು ನನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡುವಂತಾಗಿದೆ. ನಾನೇನು ತಪ್ಪು ಮಾಡಿಲ್ಲ. ಪಾರ್ಟಿಗಳಿಗೆ ಹೋಗಿದ್ದೆ ಅಷ್ಟೇ ಎಂದು ಹೇಳಿದ್ದಾರೆ.

ಈಗಾಗ್ಲೇ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಇವರ ಕನೆಕ್ಷನ್ ಇದ್ದವರು ಕೂಡ ಅರೆಸ್ಟ್ ಆಗಿದ್ದಾರೆ. ಇವರೆಲ್ಲರ ಮೊಬೈಲ್ ಚಾಟ್ಸ್ ಬಗ್ಗೆ ನಿಗಾ ಇಟ್ಟಿರುವ ಪೊಲೀಸರು ಸಂಪರ್ಕ ಹೊಂದಿದ್ದವರನ್ನು ಒಬ್ಬೊಬ್ಬರಂತೆ ವಿಚಾರಣೆ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ನಿರೂಪಕ ಅಕುಲ್ ಬಾಲಾಜಿ ಮತ್ತಿಬ್ಬರನ್ನು ವಿಚಾರಣೆಗೆ ಕರೆದಿದ್ದರು. ಇದೀಗ ಕಿರುತೆರೆ ನಟ-ನಟಿಯರನ್ನೂ ವಿಚಾರಣೆಗೆ ಕರೆಸುತ್ತಿದ್ದು, ಡ್ರಗ್ ಜಾಲ ಕನ್ನಡ ಫಿಲಂ ಮತ್ತು ಸೀರಿಯಲ್ ಇಂಡಸ್ಟ್ರಿಯಲ್ಲಿ ಆಳವಾಗಿ ಬೇರು ಬಿಟ್ಟಿದೆ ಎನ್ನಲಾಗುತ್ತಿದೆ.
Join our WhatsApp group for latest news updates
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm