ಬ್ರೇಕಿಂಗ್ ನ್ಯೂಸ್
23-03-22 06:02 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.23 : ಹಿಂದುಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಹೇರುವ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ ಹಿಂದೆಯೇ ಹೇಳಿದ್ದೆ. ಇವರು ಚುನಾವಣೆ ಬರುವಾಗ ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ, ಕೋಮು ಸಾಮರಸ್ಯ ಕದಡಿಸುವ ಕೆಲಸ ಮಾಡುತ್ತಾರೆಂದು ಭವಿಷ್ಯ ನುಡಿದಿದ್ದೆ ಎಂದರು.
ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಹರಡಿಸಲು ಯತ್ನಿಸುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.
ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಬದಿಗೆ ಸರಿಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದೆಯಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಖಂಡಿಸಿದರು.
Udupi Kapu jatre restriction for Muslims will spread across state, HDK slams BJP party for disturbing harmony.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm