ಬ್ರೇಕಿಂಗ್ ನ್ಯೂಸ್
26-03-22 05:08 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಅದನ್ನು ಯಥಾವತ್ ಪಾಲಿಸಲು ರಾಜ್ಯ ಸರಕಾರ ಮುಂದಾಗಿದೆ. ಕೋರ್ಟ್ ತೀರ್ಪು ನೀಡಿದ್ದರೂ ಒಂದೆಡೆ ಅದನ್ನು ಪಾಲಿಸಲು ಮೀನಮೇಷ ಎಣಿಸುತ್ತಿರುವ ಪ್ರಸಂಗ ನಡೆಯುತ್ತಿರುವಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.
ಮಾ.28ರಿಂದ ಎಪ್ರಿಲ್ 11ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಆಯಾ ಶಾಲೆಗಳ ನಿಗದಿತ ಸಮವಸ್ತ್ರ ಧರಿಸಿಯೇ ಬರಬೇಕೆಂದು ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿದೆ. ಸರಕಾರಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿಗದಿಪಡಿಸಿದ ಸಮವಸ್ತ್ರ ಧರಿಸಬೇಕು. ಇದೇ ವೇಳೆ, ಖಾಸಗಿ ಶಾಲಾಡಳಿತಗಳಲ್ಲಿಯೂ ಆಡಳಿತ ಸೂಚಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖ ಮಾಡಿದೆ.
ಅಲ್ಲದೆ, ಇತ್ತೀಚೆಗೆ ಹೈಕೋರ್ಟ್ ಸಮವಸ್ತ್ರದ ಕುರಿತು ನೀಡಿರುವ ತೀರ್ಪು ಸರಕಾರ ಈ ಹಿಂದೆ ನೀಡಿದ್ದ ಆದೇಶಗಳನ್ನು ಎತ್ತಿ ಹಿಡಿದಿದೆ ಎನ್ನುವುದನ್ನೂ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ರಾಜ್ಯದಲ್ಲಿ 80 ಸಾವಿರಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. ಕೆಲವು ಕಡೆ 600-700 ಮಂದಿ ಅಷ್ಟೇ ಶಾಲೆಗಳಿಗೆ ಬರದೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರ ಧರಿಸಬೇಕೆಂಬ ಸರಕಾರದ ಸೂಚನೆಗೆ ಹೆಚ್ಚಿನ ಜನ ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
Students wearing hijab will not be allowed to sit for exams which will conclude on April 22. The government has also said that wearing a mask is not mandatory. Going by the recent judgement by the Karnataka High Court on the hijab row, the Karnataka Secondary Education Examination Board (KSEEB) has instructed all students appearing for the exams to stick to the court order on uniform.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm