ಬ್ರೇಕಿಂಗ್ ನ್ಯೂಸ್
26-03-22 10:51 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ಮದ್ರಸಾದಲ್ಲಿ ದೇಶ ವಿರೋಧಿ ವಿಚಾರಗಳನ್ನು ಕಲಿಸಲಾಗುತ್ತಿದ್ದು, ಅಲ್ಲಿ ಕಲಿಯುವ ಮಂದಿ ದೇಶ ವಿರೋಧಿಗಳಾಗಿ ಪರಿವರ್ತನೆ ಆಗುತ್ತಿದ್ದಾರೆ. ಹಾಗಾಗಿ ಇಂಥ ಮದ್ರಸಾ ಕಲಿಕೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರನ್ನು ನಾನು ಆಗ್ರಹಿಸುತ್ತೇನೆ. ಹಿಂದು ಮತ್ತು ಕ್ರಿಸ್ತಿಯನ್ನರಿಗೆ ಇತರ ಶಾಲೆಗಳಲ್ಲಿ ಕಲಿಸುವುದೇ ಸಾಕಾಗುತ್ತದೆ ಎಂದಿರುವಾಗ ಇವರಿಗೆ ಮಾತ್ರ ಯಾಕೆ ಮದ್ರಸಾ ಶಿಕ್ಷಣ ಬೇಕು. ಅಲ್ಲಿ ದೇಶ ವಿರೋಧಿ ವಿಚಾರಗಳನ್ನೇ ಕಲಿಸುತ್ತಿದ್ದಾರೆ. ಒಂದೋ ಅಲ್ಲಿ ಇತರ ಶಾಲೆಗಳಲ್ಲಿ ಕಲಿಸುವ ಪಠ್ಯಗಳನ್ನಷ್ಟೇ ಕಲಿಸಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಅವನ್ನು ನಿಷೇಧ ಮಾಡಬೇಕು ಎಂದು ರೇಣುಕಾಚಾರ್ಯ ಹೇಳಿದ್ದಾರೆ.


ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ರೇಣುಕಾ, ನಾನು ಕಾಂಗ್ರೆಸ್ ನಾಯಕರ ಬಳಿ ಕೇಳಲು ಬಯಸುತ್ತೇನೆ. ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದು ಯಾರು.. ನೀವು ಮಾಡಿದ್ದೇ ಅಥವಾ ನಾವು ಮಾಡಿದ್ದೇ.. ನಿಮಗೆ ವೋಟ್ ಬ್ಯಾಂಕ್ ರಾಜಕೀಯವೇ ಮುಖ್ಯವಾಗಿದೆ. ನಮಗೆ ಮದ್ರಸಾ ಶಿಕ್ಷಣ ಯಾಕೆ ಬೇಕು ಎಂಬ ಬಗ್ಗೆ ಕಾಂಗ್ರೆಸಿಗರ ನಿಲುವು ಏನು ತಿಳಿಸಬೇಕು. ಮದ್ರಸಾ ಶಿಕ್ಷಣದ ಉದ್ದೇಶ ಏನಿದೆ ಹೇಳಿ.. ಅಲ್ಲಿ ಕಲಿತ ಮಕ್ಕಳು ನಾಳೆ ದೇಶ ವಿರೋಧಿಗಳೇ ಆಗುತ್ತಾರೆ. ಅವರೆಂದೂ ಭಾರತ್ ಮಾತಾ ಕೀ ಜೈ ಎಂದು ಹೇಳುವುದಿಲ್ಲ ಎಂದು ಹೇಳಿದ್ದಾರೆ.
![]()
ಕೆಲವು ದೇಶ ವಿರೋಧಿ ಸಂಘಟನೆಗಳು ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕ ಬಂದ್ ಮಾಡಲು ಕರೆ ಕೊಟ್ಟಿದ್ದವು. ಇದನ್ನು ಕರ್ನಾಟಕ ಸರಕಾರ ಸರಿ ಎಂದು ಒಪ್ಪಿಕೊಳ್ಳುತ್ತಾ.. ಇದೇನು ಪಾಕಿಸ್ಥಾನವೋ, ಬಾಂಗ್ಲಾದೇಶವೋ ಅಥವಾ ಬೇರಾವುದೋ ಇಸ್ಲಾಮಿಕ್ ದೇಶವೋ.. ಇದನ್ನು ನಾವು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸಿಗರು ಕರ್ನಾಟಕ ಬಂದ್ ಕರೆಯನ್ನು ಸದನದಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ರೇಣುಕಾ ಟೀಕಿಸಿದ್ದಾರೆ.
ರೇಣುಕಾಚಾರ್ಯ ತನ್ನ ಇಬ್ಬರು ಮಕ್ಕಳ ಹೆಸರಲ್ಲಿ ದಲಿತ ಕೋಟಾದಲ್ಲಿ ಸೌಲಭ್ಯ ಪಡೆಯಲು ನಕಲಿ ಜಾತಿ ಸರ್ಟಿಫಿಕೇಟ್ ಮಾಡಿಕೊಂಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿದ್ದು, ಇದರ ಬಗ್ಗೆ ಕ್ರಿಮಿನಲ್ ಕೇಸ್ ದಾಖಲಿಸಲು ಸದನದಲ್ಲಿ ಆಗ್ರಹ ಮಾಡಿತ್ತು. ಆದರೆ ಈ ಬಗ್ಗೆ ಸದನದಲ್ಲಿಯೇ ಪ್ರತಿಕ್ರಿಯೆ ನೀಡಿದ್ದ ರೇಣುಕಾಚಾರ್ಯ, ನಾನು ಯಾವತ್ತೂ ಅಂಥ ಕೃತ್ಯ ಮಾಡಿಲ್ಲ. ಮಕ್ಕಳ ಹೆಸರಲ್ಲಿ ನಾನು ಅಂಥ ಕೆಲಸ ಮಾಡಿದ್ದಲ್ಲಿ ನನ್ನನ್ನು ನೇಣಿಗೆ ಹಾಕಿ. ಕಾಂಗ್ರೆಸಿಗರು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದರು.
Karnataka MLA MP Renukacharya has urged Chief Minister Basavaraj Bommai and Primary and Secondary Education Minister to ban madrasas because anti-national lessons are being taught there.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm