ಬ್ರೇಕಿಂಗ್ ನ್ಯೂಸ್
28-03-22 08:07 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ 116 ಎಕ್ರೆ ಸರ್ಕಾರಿ ಜಮೀನನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ ಕೆಐಎಡಿಬಿಗೆ ಸೇರಿದ 116 ಎಕರೆ ಜಮೀನನ್ನ ಯಾವುದೇ ಅರ್ಹತೆ ಹೊಂದಿರದ ಸಿಇಎಸ್ಎಸ್ ಎನ್ನುವ ಹೆಸರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗ್ತಿದೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಆದರೆ ಈ ನಿಯಮವನ್ನ ಗಾಳಿಗೆ ತೂರಿ ಅಧಿಕಾರ ದುರುಪಯೋಗ ಮಾಡಿಕೊಂಡು ಖಾಸಗಿ ವಿವಿ ಸ್ಥಾಪಿಸಲು ಜಮೀನು ಮಂಜೂರು ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿದ್ದರು. ಆದರೆ, 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿ ರೂಪಾಯಿಗೆ ಭೂಮಿ ಮಂಜೂರು ಮಾಡಲಾಗಿದೆ. ಸಿಎಂ ಆಗಿದ್ದ ಅವಧಿಯಲ್ಲಿ ಬಿಎಸ್ವೈ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಜಮೀನು ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮವಾಗಿ ಸದರಿ ಜಮೀನನ್ನು ಮಂಜೂರು ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಮಾಡಿದ್ದರು ಎಂಬ ಆರೋಪ ಯಡಿಯೂರಪ್ಪ ಮೇಲಿದೆ. ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಭೂಮಿ ಮಂಜೂರಾತಿಗೆ ಆದೇಶ ಮಾಡಿದ್ದರು. ಸರಕಾರದ ಮಾರ್ಗಸೂಚಿಯಂತೆ ನಡೆದುಕೊಳ್ಳದ ಕಾರಣ ಸರಕಾರದ ಬೊಕ್ಕಸಕ್ಕೆ 136 ಕೋಟಿ ನಷ್ಟವಾಗಿತ್ತು. ಇಲ್ಲಿ ಶಿಕ್ಷಣದ ಉದ್ದೇಶ ಬದಿಗಿಟ್ಟು ರಿಯಲ್ ಎಸ್ಟೇಟ್ ವ್ಯಾಪಾರದ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿದೆ ಎಂದು ದೂರುದಾರ ರಾಜಣ್ಣ ದೂರಿದ್ದಾರೆ.
Former chief minister BS Yeddyurappa is back in a quake. Former CM BS Yeddyurappa has been accused of illegally selling state land using his influence. This relationship is related to social worker K.C. Rajanna and his team of lawyers have lodged a complaint with the Corruption Prevention Squad (ACB).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm