ಬ್ರೇಕಿಂಗ್ ನ್ಯೂಸ್
28-03-22 08:07 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ 116 ಎಕ್ರೆ ಸರ್ಕಾರಿ ಜಮೀನನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ ಕೆಐಎಡಿಬಿಗೆ ಸೇರಿದ 116 ಎಕರೆ ಜಮೀನನ್ನ ಯಾವುದೇ ಅರ್ಹತೆ ಹೊಂದಿರದ ಸಿಇಎಸ್ಎಸ್ ಎನ್ನುವ ಹೆಸರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗ್ತಿದೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಆದರೆ ಈ ನಿಯಮವನ್ನ ಗಾಳಿಗೆ ತೂರಿ ಅಧಿಕಾರ ದುರುಪಯೋಗ ಮಾಡಿಕೊಂಡು ಖಾಸಗಿ ವಿವಿ ಸ್ಥಾಪಿಸಲು ಜಮೀನು ಮಂಜೂರು ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿದ್ದರು. ಆದರೆ, 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿ ರೂಪಾಯಿಗೆ ಭೂಮಿ ಮಂಜೂರು ಮಾಡಲಾಗಿದೆ. ಸಿಎಂ ಆಗಿದ್ದ ಅವಧಿಯಲ್ಲಿ ಬಿಎಸ್ವೈ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಜಮೀನು ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮವಾಗಿ ಸದರಿ ಜಮೀನನ್ನು ಮಂಜೂರು ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಮಾಡಿದ್ದರು ಎಂಬ ಆರೋಪ ಯಡಿಯೂರಪ್ಪ ಮೇಲಿದೆ. ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಭೂಮಿ ಮಂಜೂರಾತಿಗೆ ಆದೇಶ ಮಾಡಿದ್ದರು. ಸರಕಾರದ ಮಾರ್ಗಸೂಚಿಯಂತೆ ನಡೆದುಕೊಳ್ಳದ ಕಾರಣ ಸರಕಾರದ ಬೊಕ್ಕಸಕ್ಕೆ 136 ಕೋಟಿ ನಷ್ಟವಾಗಿತ್ತು. ಇಲ್ಲಿ ಶಿಕ್ಷಣದ ಉದ್ದೇಶ ಬದಿಗಿಟ್ಟು ರಿಯಲ್ ಎಸ್ಟೇಟ್ ವ್ಯಾಪಾರದ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿದೆ ಎಂದು ದೂರುದಾರ ರಾಜಣ್ಣ ದೂರಿದ್ದಾರೆ.
Former chief minister BS Yeddyurappa is back in a quake. Former CM BS Yeddyurappa has been accused of illegally selling state land using his influence. This relationship is related to social worker K.C. Rajanna and his team of lawyers have lodged a complaint with the Corruption Prevention Squad (ACB).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm