ಬ್ರೇಕಿಂಗ್ ನ್ಯೂಸ್
30-03-22 01:10 pm HK Desk news ಕರ್ನಾಟಕ
ಮಂಡ್ಯ, ಮಾ.30: ಕೊಲ್ಲೂರಿನಲ್ಲಿ ಟಿಪ್ಪು ಹೆಸರಿನಲ್ಲಿ ಸಲಾಂ ಆರತಿ ಮಾಡುವುದಕ್ಕೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಮಂಡ್ಯದ ಮೇಲುಕೋಟೆಯಲ್ಲೂ ಸಲಾಂ ಪೂಜಾ ಪದ್ಧತಿ ಇರುವುದು ಬೆಳಕಿಗೆ ಬಂದಿದೆ. ಮೇಲುಕೋಟೆ ಚೆಲುವನಾರಾಯಣ ದೇವಾಲಯದಲ್ಲಿ ಪ್ರತಿನಿತ್ಯ ದೀವಟಿಗೆ ಸಲಾಂ ಹೆಸರಿನಲ್ಲಿ ಟಿಪ್ಪು ಸ್ಮರಣೆ ನಡೆಯುತ್ತಿದ್ದು ಇದರ ಹೆಸರು ಬದಲಿಸಬೇಕೆಂದು ಹಿಂದು ಸಂಘಟನೆಗಳು ಆಕ್ಷೇಪ ಎತ್ತಿವೆ.
ಮೇಲುಕೋಟೆ ಚೆಲುವನಾರಾಯಣ ದೇವಸ್ಥಾನಕ್ಕೆ ಮೈಸೂರಿನ ರಾಜನಾಗಿದ್ದ ಟಿಪ್ಪು ಅಭಯ ನೀಡಿದ್ದ ಎಂಬ ನೆಪದಲ್ಲಿ ಆತನ ಹೆಸರಿನಲ್ಲಿ ದೀವಟಿಗೆ ಸಲಾಂ ಎಂದು ಪ್ರತಿನಿತ್ಯ ಪೂಜೆ ನಡೆಯುತ್ತದೆ. ಹಿಂದಿನಿಂದಲೂ ಪಾರಂಪರಿಕವಾಗಿ ನಡೆದು ಬಂದಿದ್ದ ಸಂಧ್ಯಾರತಿಯನ್ನೇ ದೀವಟಿಗೆ ಸಲಾಂ ಎಂದು ಟಿಪ್ಪು ಕಾಲದಲ್ಲಿ ಆತನ ಅಣತಿಯಂತೆ ಬದಲಾವಣೆ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಇದೀಗ ಕೊಲ್ಲೂರಿನಲ್ಲಿ ಸಲಾಂ ಆರತಿ ಹೆಸರು ಬದಲಿಸಬೇಕೆಂಬ ಆಗ್ರಹ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ಹಿಂದು ಸಂಘಟನೆಗಳ ನಾಯಕರು, ಧಾರ್ಮಿಕ ಪರಿಷತ್ ನಾಯಕರು ಮೇಲುಕೋಟೆಯ ದೀವಟಿಗೆ ಸಲಾಂ ಆರತಿಯನ್ನು ಒಂದೋ ನಿಲ್ಲಿಸಬೇಕು, ಇಲ್ಲವೇ ಅದರ ಹೆಸರು ಬದಲಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು, ಹೆಸರು ಬದಲಾವಣೆಗೆ ಒತ್ತಾಯಿಸಿದ್ದಾರೆ. ಹಿಂದು ಸಂಪ್ರದಾಯದಲ್ಲಿ ಸಲಾಂ ಹೆಸರಿನ ಆರತಿಗೆ ಅವಕಾಶ ಇಲ್ಲ. ಅನ್ಯಧರ್ಮದ ದೇವರು, ರಾಜನ ಹೆಸರಿನಲ್ಲಿ ಪೂಜೆ ನಡೆಸೋದು ಬೇಡ. ಹಾಗಾಗಿ ದೀವಟಿಗೆ ಸಲಾಂ ಎನ್ನುವ ಪೂಜಾ ಪದ್ಧತಿಯನ್ನು ಬದಲಿಸುವಂತೆ ಒತ್ತಾಯ ಮಾಡಿದ್ದಾರೆ.
Salam Mangalarati ritual at Mandya temple requested to be cancelled after Kollur temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am