ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am