ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am