ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm