ಬ್ರೇಕಿಂಗ್ ನ್ಯೂಸ್
01-04-22 12:42 pm HK Desk news ಕರ್ನಾಟಕ
ಮಂಡ್ಯ, ಎ.1 : ಬಾಲ್ಯ ವಿವಾಹ ನಿಷೇಧ ಇದ್ದರೂ ಇಲ್ಲೊಂದು ಕುಟುಂಬ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗಳಿಗೆ ಗುಟ್ಟಾಗಿ ಬಾಲ್ಯ ವಿವಾಹ ಮಾಡಿದ್ದು, ಪರೀಕ್ಷೆ ಹಿನ್ನೆಲೆಯಲ್ಲಿ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು ಎರಡು ದಿನಗಳ ಬಳಿಕ ವಿಚಾರ ಬಯಲಾಗಿದೆ. ಮಾರ್ಚ್ 27 ರಂದು ಮನೆಯಲ್ಲೇ ಗುಟ್ಟಾಗಿ SSLC ಬಾಲಕಿಯನ್ನು ಯುವಕನ ಜೊತೆಗೆ ಮದುವೆ ಮಾಡಲಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಸಂಬಂಧಿ ಯುವಕನೊಂದಿಗೆ ಮದುವೆ ಮಾಡಿದ್ದರು.
ಮರುದಿನ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದುದರಿಂದ ಪೋಷಕರೇ ಮಗಳ ತಾಳಿ ಮತ್ತು ಕಾಲುಂಗುರ ಬಿಚ್ಚಿಸಿ ಪರೀಕ್ಷೆ ಬರೆಯಲು ಕಳುಹಿಸಿದ್ದರು. ಪರೀಕ್ಷೆ ಬರೆಯಲು ಹೋಗಿದ್ದಾಗ ಬಾಲಕಿ ತನ್ನ ಸ್ನೇಹಿತೆಗೆ ಮದುವೆ ಬಗ್ಗೆ ಹೇಳಿಕೊಂಡಿದ್ದಳು. ಇದರಿಂದ ಮಾಹಿತಿ ಶಾಲೆಯ ಸಿಬಂದಿಗೆ ತಿಳಿದು ಮಕ್ಕಳ ರಕ್ಷಣಾ ಇಲಾಖೆಗೆ ಹೋಗಿತ್ತು. ಮೊದಲೇ ಗುಮಾನಿ ಹೊಂದಿದ್ದ ಅಧಿಕಾರಿಗಳು ಮನೆಗೆ ಬಂದು ಬಾಲಕಿಯ ರಕ್ಷಣೆ ಮಾಡಿದ್ದಾರೆ.
ಸದ್ಯ ಸಂತ್ರಸ್ತ ಬಾಲಕಿಯನ್ನು ಮಂಡ್ಯದ ಬಾಲ ಮಂದಿರದಲ್ಲಿ ಇರಿಸಲಾಗಿದ್ದು ಬಾಲ್ಯ ವಿವಾಹ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ. ಮದುವೆ ನಿಶ್ಚಯವಾಗಿದ್ದಾಗಲೇ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ದೂರು ಹೋಗಿದ್ದರಿಂದ ಕುಟುಂಬಕ್ಕೆ ಎಚ್ಚರಿಕೆ ನೀಡಿದ್ದರು. ಬಾಲ್ಯ ವಿವಾಹದ ಬಗ್ಗೆ ಕಂಪ್ಲೇಂಟ್ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಮಾರ್ಚ್ 18 ಮತ್ತು 25 ರಂದು ಬಾಲಕಿಯ ಮನೆಗೆ ಭೇಟಿ ನೀಡಿ ವಾರ್ನ್ ಮಾಡಿತ್ತು. ಆದರೆ ಅಧಿಕಾರಿಗಳ ಎಚ್ಚರಿಕೆ ಹಾಗೂ ಬುದ್ಧಿ ಮಾತಿಗೂ ಕೇರ್ ಮಾಡದೇ 27ರಂದು ಪೋಷಕರೇ ಕದ್ದು ಮುಚ್ಚಿ ವಿವಾಹ ಮಾಡಿಸಿದ್ದಾರೆ.
Mandya Child marriage exposed, sslc student caught while writing exams
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm