ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm