ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am