ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm