ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm